ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಮತ್ತು ಪಪ್ಪಾಯ (ಪರಂಗಿ)  ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ಬಜಾಜ್ ಅಲೆನ್ಸ್ ಇನ್ಸೂರೆನ್ಸ ಕಂಪನಿ ವಿಮೆ ನೀಡಲಿದೆ.
ದಾಳಿಂಬೆ ಮತ್ತು ಪಪ್ಪಾಯ (ಪರಂಗಿ) ಬೆಳೆಗೆ ವಿಮೆ ಕಂತು ಪಾವತಿಗೆ ಜೂನ್ 30 ಕೊನೆಯ ದಿನವಾಗಿದೆ. ರೈತರು ಸ್ವಯಂ ದೃಢೀಕರಣ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ ಕಾರ್ಡ ಸೇರಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ತೋಟಗಾರಿಕೆ ಮಾಹಿತಿ ಹಾಗೂ ಸಲಹಾ ಕೇಂದ್ರ ಗದಗಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದೆಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಚೀನಾ ಬಗ್ಗೆ ನಿಖರ ಮಾಹಿತಿ ನೀಡಿ: ರಾಹುಲ್ ಗಾಂಧಿ

ದೆಹಲಿ: ಈ ತಿಂಗಳ ಆರಂಭದಲ್ಲಿ ಲಡಾಕ್ ನಲ್ಲಿ ಭಾರತ ಮತ್ತು ಚೀನ ಮಿಲಿಟರಿ ಮುಖಾಮುಖಿಯಾದ ಹಿನ್ನೆಲೆ…

ವಿರಾಟ್ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ಕೊಡಬೇಕು ಎಂದವರಾರು? ಏಕೆ?

ಮುಂಬಯಿ: ಬಾಲಿವುಡ್ ಮತ್ತು ಕ್ರಿಕೆಟ್ ನಂಟು ತೀರಾ ಹಳೆಯದು. ಅದಕ್ಕೆ ಇತ್ತೀಚೆಗೆ ಮತ್ತೊಂದು ಕೊಂಡಿ ಬೆಸೆದವರು…

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.