ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ ಲಾಕ್ಡೌರನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಲಾಕ್ಡೌ್ನ್ಗೆೊ ಜಿಲ್ಲಾಡಳಿತ ತೀರ್ಮಾನಿಸಿದೆ. ಮೊದಲ ಆಷಾಡ ಶುಕ್ರವಾರವಾದರೂ ಕೊರೊನಾ ಭಯಕ್ಕೆ ಚಾಮುಂಡೇಶ್ವರಿ ದೇಗುಲು ತೆರೆಯುತ್ತಿಲ್ಲ. ಮೈಸೂರಿನ ಬೇರೆ ಯಾವುದೇ ದೇವಾಲಯಗಳು ಕೂಡ ಮೂರು ದಿನ ದರ್ಶನಕ್ಕೆ ಲಭ್ಯ ಇಲ್ಲ ಎನ್ನಲಾಗಿದೆ.

ಜೊತೆಗೆ ಶನಿವಾರ ಹಾಗೂ ಭಾನುವಾರ ಮೈಸೂರು ಅರಮನೆ ಹಾಗೂ ಮೃಗಾಲಯ ಬಂದ್ಗೆಲ ಪಾಲಿಕೆ ಆದೇಶಿಸಿದೆ. ಪ್ರಮುಖ 5 ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಸಂತೇಪೇಟೆ, ಶಿವರಾಂಪೇಟೆ, ಮನ್ನಾರ್ಸ್ ಮಾರ್ಕೆಟ್ ಮತ್ತು ಬೋಟಿ ಬಜಾರ್ ಗುರುವಾರದಿಂದ ನಾಲ್ಕು ದಿನ ಬಂದ್ ಮಾಡಲಾಗಿದೆ.

ಧಾರವಾಡ ಜಿಲ್ಲೆಯ ಮೊರಬ ಗ್ರಾಮದಲ್ಲಿ 40ಕ್ಕೂ ಹೆಚ್ಚು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ. ಗ್ರಾಮಕ್ಕೆ ಹೊರಗಿನವರು ಯಾರೂ ಒಳಗೆ ಬರುವಂತಿಲ್ಲ. ಕೊಡಗಿನಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗುರುವಾರದಿಂದ 21 ದಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ಗಗಳನ್ನು ಬಂದ್ ಮಾಡಲಾಗಿದೆ.

ದಾವಣಗೆರೆಯ ಚನ್ನಗಿರಿ ಹಾಗೂ ಹರಿಹರದಲ್ಲಿ ಸ್ಥಳೀಯ ಶಾಸಕರು, ಸಂಘ-ಸಂಸ್ಥೆಯವರು, ವಿವಿಧ ಪಕ್ಷದ ಮುಖಂಡರು ಸೇರಿ ಸ್ವಯಂ ಪ್ರೇರಿತವಾಗಿ ಲಾಕ್ಡೌ್ನ್ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ವ್ಯಾಪಾರಸ್ಥರೇ ಸ್ವಯಂಪ್ರೇರಿತವಾಗಿ ವ್ಯಾಪಾರ ವಹಿವಾಟಿಗೆ ಸಮಯ ನಿಗದಿ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಜೂನ್ 30ರ ವರೆಗೆ ಹೊಟೇಲ್ಗ ಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ರಾಮನಗರ ಜಿಲ್ಲೆಯ ಕನಕಪುರ, ಮಾಗಡಿ ಹಾಗೂ ರಾಮನಗರ ಪಟ್ಟಣಗಳಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್ಡೌವನ್ ಘೋಷಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 11ರ ವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶ ನೀಡಲಾಗಿದೆ. ಆ ನಂತರ ಲಾಕ್ ಡೌನ್ ಮಾಡಲಾಗುತ್ತಿದೆ ಅಗತ್ಯ, ತುರ್ತು ಸೇವೆ ಹೊರೆತುಪಡಿಸಿ ಎಲ್ಲವನ್ನು ಜಿಲ್ಲಾಡಳಿತ ಬಂದ್ ಮಾಡಿದೆ.

Leave a Reply

Your email address will not be published. Required fields are marked *

You May Also Like

Актуальное работающее зеркало БК Леон Рабочее зеркало официального сайта букмекерской конторы Леон

Актуальное работающее зеркало БК Леон Рабочее зеркало официального сайта букмекерской конторы Леон…

ಗಳಿಕೆ ರಜೆ ನಗದಿಕರಣ ರದ್ದು!

ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ

ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!