ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ ಲಾಕ್ಡೌರನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಲಾಕ್ಡೌ್ನ್ಗೆೊ ಜಿಲ್ಲಾಡಳಿತ ತೀರ್ಮಾನಿಸಿದೆ. ಮೊದಲ ಆಷಾಡ ಶುಕ್ರವಾರವಾದರೂ ಕೊರೊನಾ ಭಯಕ್ಕೆ ಚಾಮುಂಡೇಶ್ವರಿ ದೇಗುಲು ತೆರೆಯುತ್ತಿಲ್ಲ. ಮೈಸೂರಿನ ಬೇರೆ ಯಾವುದೇ ದೇವಾಲಯಗಳು ಕೂಡ ಮೂರು ದಿನ ದರ್ಶನಕ್ಕೆ ಲಭ್ಯ ಇಲ್ಲ ಎನ್ನಲಾಗಿದೆ.

ಜೊತೆಗೆ ಶನಿವಾರ ಹಾಗೂ ಭಾನುವಾರ ಮೈಸೂರು ಅರಮನೆ ಹಾಗೂ ಮೃಗಾಲಯ ಬಂದ್ಗೆಲ ಪಾಲಿಕೆ ಆದೇಶಿಸಿದೆ. ಪ್ರಮುಖ 5 ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಸಂತೇಪೇಟೆ, ಶಿವರಾಂಪೇಟೆ, ಮನ್ನಾರ್ಸ್ ಮಾರ್ಕೆಟ್ ಮತ್ತು ಬೋಟಿ ಬಜಾರ್ ಗುರುವಾರದಿಂದ ನಾಲ್ಕು ದಿನ ಬಂದ್ ಮಾಡಲಾಗಿದೆ.

ಧಾರವಾಡ ಜಿಲ್ಲೆಯ ಮೊರಬ ಗ್ರಾಮದಲ್ಲಿ 40ಕ್ಕೂ ಹೆಚ್ಚು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ. ಗ್ರಾಮಕ್ಕೆ ಹೊರಗಿನವರು ಯಾರೂ ಒಳಗೆ ಬರುವಂತಿಲ್ಲ. ಕೊಡಗಿನಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗುರುವಾರದಿಂದ 21 ದಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ಗಗಳನ್ನು ಬಂದ್ ಮಾಡಲಾಗಿದೆ.

ದಾವಣಗೆರೆಯ ಚನ್ನಗಿರಿ ಹಾಗೂ ಹರಿಹರದಲ್ಲಿ ಸ್ಥಳೀಯ ಶಾಸಕರು, ಸಂಘ-ಸಂಸ್ಥೆಯವರು, ವಿವಿಧ ಪಕ್ಷದ ಮುಖಂಡರು ಸೇರಿ ಸ್ವಯಂ ಪ್ರೇರಿತವಾಗಿ ಲಾಕ್ಡೌ್ನ್ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ವ್ಯಾಪಾರಸ್ಥರೇ ಸ್ವಯಂಪ್ರೇರಿತವಾಗಿ ವ್ಯಾಪಾರ ವಹಿವಾಟಿಗೆ ಸಮಯ ನಿಗದಿ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಜೂನ್ 30ರ ವರೆಗೆ ಹೊಟೇಲ್ಗ ಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ರಾಮನಗರ ಜಿಲ್ಲೆಯ ಕನಕಪುರ, ಮಾಗಡಿ ಹಾಗೂ ರಾಮನಗರ ಪಟ್ಟಣಗಳಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್ಡೌವನ್ ಘೋಷಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 11ರ ವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶ ನೀಡಲಾಗಿದೆ. ಆ ನಂತರ ಲಾಕ್ ಡೌನ್ ಮಾಡಲಾಗುತ್ತಿದೆ ಅಗತ್ಯ, ತುರ್ತು ಸೇವೆ ಹೊರೆತುಪಡಿಸಿ ಎಲ್ಲವನ್ನು ಜಿಲ್ಲಾಡಳಿತ ಬಂದ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ಅಕ್ರಮ ಮಣ್ಣು ಲೂಟಿ ಆರೋಪ : ಶಾಸಕ ಬಂಡಿ ರಾಜಿನಾಮೆಗೆ ಒತ್ತಾಯ

ಕೆರೆಯ ಗರಸು ಮಣ್ಣನ್ನು ಅಕ್ರಮವಾಗಿ ಲೂಟಿ ಮಾಡಿದ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಮೀಟಿ ವಕ್ತಾರ ಬಿ.ಎಸ್.ಶೀಲವಂತರ ಆಗ್ರಹಿಸಿದ್ದಾರೆ.

ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಂಡರೆ ಸುಮ್ಮನಿರಲ್ಲ

ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗದಗ – ಬೇಟಗೆರಿ ನಗರಸಭೆಯಲ್ಲಿ ಯಾರಿಗೆ ಎಷ್ಟು ಮತದಾನದ ಪಟ್ಟಿ ಪ್ರಕಟ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ಮತ ಏಣಿಕೆಯಲ್ಲಿ ಮುಗಿದಿದ್ದು, ಯಾವ ಅಭ್ಯರ್ಥಿಗೆ ಎಷ್ಟು ಮತ ಎಂದು…