ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ) ಬೇಡಿಕೆ ಹೆಚ್ಚುತ್ತಿದೆ. ಇದರಿಂದಾಗಿ ಆತಂಕ ಹೆಚ್ಚಾಗುತ್ತಿದೆ.

ಜೂ. 11ರಂದು ರಾಜ್ಯದಲ್ಲಿ 10 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಜೂ. 25ಕ್ಕೆ ಈ ಸಂಖ್ಯೆ 112ಕ್ಕೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಜೂನ್‌ 11ರಂದು ಮೂವರು ಐಸಿಯುನಲ್ಲಿದ್ದರೆ 15 ದಿನಗಳ ನಂತರ ಈ ಸಂಖ್ಯೆ 63ಕ್ಕೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಒಟ್ಟು 305 ಐಸಿಯು ಬೆಡ್‌ಗಳಿದ್ದು, ಅದರ ಪೈಕಿ ಶೇ. 30ರಷ್ಟು ಐಸಿಯು ಬೆಡ್ ತುಂಬಿದಂತಾಗಿದೆ.
ರಾಜಧಾನಿಯಲ್ಲಿ ಶೀತ ಜ್ವರ ಸಂಬಂಧಿ ಅನಾರೋಗ್ಯ (ಐಎಲ್‌ಐ), ತೀವ್ರ ಉಸಿರಾಟದ ಸಮಸ್ಯೆ (ಸಾರಿ)ಯಿಂದ ಬಳಲುತ್ತಿರುವವರ ಸೋಂಕಿತರ ಸಂಖ್ಯೆ ಹೆಚ್ಚು ಎನ್ನುತ್ತಾರೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ಕುಮಾರ್‌ ಪಾಂಡೆ. ಬೆಂಗಳೂರಿನಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಇಂಥಹ ಸಮಸ್ಯೆಗಳಿಂದ ಇರುವವರೇ ಆಗಿದ್ದಾರೆ.
ಐಎಲ್‌ಐ, ಸಾರಿ ರೋಗಿಗಳ ರಕ್ತದಲ್ಲಿಆಮ್ಲಜನಕ ಪ್ರಮಾಣ ಕಡಿಮೆ ಇರುವುದು, ಅವರು ಉಸಿರಾಡಲು
ವೈದ್ಯರನ್ನು ಗೊಂದಲಕ್ಕೆ ತಳ್ಳುವ ಸಂಗತಿ ಎಂದರೆ, ಕೆಲವೊಂದು ರೋಗಿಗಳು ಅತ್ಯಂತ ಸಾಮಾನ್ಯರಂತೆ ಕಾಣಿಸುತ್ತಾರೆ. ಆದರೆ, ಒಮ್ಮೆಗೇ ಆಕಿಜನ್‌ ಮಟ್ಟ ಕುಸಿಯುತ್ತದೆ. ಇತ್ತೀಚೆಗೆ 32 ವರ್ಷದ ಯುವಕನೊಬ್ಬ ಈ ರೀತಿಯ ಸಮಸ್ಯೆ ಅನುಭವಿಸಿ ಸಾವು ಕಂಡರು ಎನ್ನುತ್ತಾರೆ ಪಂಕಜ್‌ ಕುಮಾರ್‌ ಪಾಂಡೆ. ಒಂದೊಮ್ಮೆ ಉಸಿರಾಟದ ಸಮಸ್ಯೆ ಸ್ಪಷ್ಟವಾಗಿ ಕಾಣಿಸಿದರೆ ಕೂಡಲೇ ಚಿಕಿತ್ಸೆ ನೀಡಿ ಇಂಥವರನ್ನು ಬದುಕಿಸಬಹುದಾಗಿರುತ್ತದೆ.
ಆರೋಗ್ಯವಂತ ವ್ಯಕ್ತಿಗಳ ರಕ್ತದಲ್ಲಿ ಶೇ. 95ಕ್ಕಿಂತ ಹೆಚ್ಚು ಆಮ್ಲಜನಕ ಇರುತ್ತದೆ. ಇದಕ್ಕಿಂತ ಕಡಿಮೆಯಾದರೆ ಶ್ವಾಸಕೋಶದಲ್ಲಿ ಸಮಸ್ಯೆ ಉಂಟಾಗುತ್ತದೆ. ಶೇ. 92ಕ್ಕಿಂತ ಕಡಿಮೆಯಾದರೆ ಆಮ್ಲಜನಕವನ್ನು ಹೊರಗಿನಿಂದ ಪೂರೈಸುವುದು ಅನಿವಾರ್ಯವಾಗುತ್ತದೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಿಕ್ಕ ಭರ್ಜರಿ ಗಿಫ್ಟ್!

ನವದೆಹಲಿ : ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…

ವಾರದಲ್ಲಿ ಸಮಸ್ಯೆ ಬಗೆಹರಿಸಲು ಕರವೆ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.