ಮಂಡ್ಯ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಕೊರೊನಾ ವಾರಿಯರ್ಸ್ ಗಂತೂ ಇದರ ಕಾಟ ಹೆಚ್ಚಾಗುತ್ತಿದೆ. ಜಿಲ್ಲೆಯ ಮದ್ದೂರು ಠಾಣೆಯ 9 ಜನ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೆಡ್ ಕಾನ್ ಸ್ಟೇಬಲ್ ಸೇರಿದಂತೆ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಅಲ್ಲದೇ, ಮದ್ದೂರು ಪಟ್ಟಣದ ಎರಡೂ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ನಿಟ್ಟಿನಲ್ಲಿ ಎರಡೂ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಕ್ಯಾರೆಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಮದ್ದೂರು ಪಟ್ಟಣದ ಪೊಲೀಸ್‌ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್‌ ಮಾಡಿ ಎಲ್ಲಾ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಲು ಎಸ್ಪಿ ಕೆ.ಪರಶುರಾಂ ಆದೇಶಿಸಿದ್ದಾರೆ.
ಸಂಚಾರಿ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಅವರ ಜೊತೆ ಕೆಲಸ ಮಾಡುತ್ತಿದ್ದ ಇತರ ಪೊಲೀಸ್ ಸಿಬ್ಬಂದಿಗೂ ಆತಂಕ ಎದುರಾಗಿದ್ದು, ಆ ಪೊಲೀಸ್ ಸಿಬ್ಬಂದಿ ಮದ್ದೂರಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಮದ್ದೂರು ನ್ಯಾಯಾಲಯದ ನ್ಯಾಯಾಧೀಶರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೇ, ಪೊಲೀಸ್ ಸಿಬ್ಬಂದಿ ಸಂಪರ್ಕಕ್ಕೆ ಬಂದಿರುವ ಇನ್ನಿತರ ಪೊಲೀಸ್ ಅಧಿಕಾರಿಗಳನ್ನು ಹಾಗೂ ಅವರ ಕುಟುಂಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.
ಮದ್ದೂರಿನ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ಸೀಲ್‌ಡೌನ್ ಆದ ಪರಿಣಾಮ ನಾಳೆಯಿಂದ ಬೇರೆ ಕಡೆ ಎರಡೂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸಲಿದ್ದು, ಈಗಾಗಲೇ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ

ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಶರಣ ಡಾ. ಈಶ್ವರ ಮಂಟೂರ ಬಯಲಾದರು‌

ಉತ್ತರಪ್ರಭ ಸುದ್ದಿ ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ…