ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಇಂದು ಪ್ಲಾಸ್ಮಾ ಚಿಕಿತ್ಸೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ಲಾಸ್ಮಾ ಚಿಕಿತ್ಸೆಯಿಂದಾಗಿ ಗಂಭೀರಸ್ಥಿತಿಯಲ್ಲಿರುವವರ ಪರಿಸ್ಥಿತಿಯನ್ನು ಶೋಚನೀಯ ಸ್ಥಿತಿಗೆ ಹೋಗದಂತೆ ತಡೆಯಬಹುದು. ನಾವು ಈ ಸಂಗತಿಯನ್ನು ಕಂಡುಕೊಂಡಿದ್ದೇವೆ ಎಂದರು.

ಎಲ್ ಎನ್ ಜೆ ಪಿ ಮತ್ತು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ ನೀಡಲಾಗಿದೆ. ಎಲ್ ಎನ್ ಜೆ ಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಕ್ಕೂ ಮುನ್ನಿಗಿಂತ ಸಾವಿನ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಕೊರೊನಾ ಸೋಂಕಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ಸಮಸ್ಯೆಯೆಂದರೆ, ಸೋಂಕಿತರಲ್ಲಿ ಆಮ್ಲಜನಕದ ಪ್ರಮಾಣ ಇದ್ದಕ್ಕಿದ್ದಂತೆ ಕೊರತೆಯಾಗುತ್ತದೆ. ಆಮ್ಲಜನಕದ ಪ್ರಮಾಣ ಶೇ. 95ರಷ್ಟು ಇರಬೇಕು. ಇದು ಶೇ. 90ಕ್ಕಿಂತ ಕಡಿಮೆಯಾದರೆ ಇದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಆಮ್ಲಜನಕದ ಪ್ರಮಾಣ ಶೇ. 85ಕ್ಕಿಂತ ಕಡಿಮೆಯಾದರೆ ತೀರಾ ಗಂಭೀರ ಎಂದು ಪರಿಗಣಿಸಲಾಗುತ್ತದೆ. ಶೇ. 90-85ರ ಪ್ರಮಾಣದ ಆಮ್ಲಜನಕ ಹೊಂದಿರುವವರು ತೀವ್ರ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಾರೆ ಎಂದರು.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಹೆಲ್ಮೆಟ್ ಜಾಗೃತಿ: ವಾಹನ ಸವಾರರಿಗೆ ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯ

ಪೊಲೀಸ್ ಇಲಾಖೆಯಿಂದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಕರಪತ್ರ ನೀಡುವ ಮೂಲಕ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಶುಕ್ರವಾರ ಜಾಗೃತಿ ಮೂಡಿಸಿದರು.

ಭಾವೈಕ್ಯದ ಮಾಧುರ್ಯ ಬೆಳಕು ತೋಂಟದ ಸಿದ್ದಲಿಂಗ ಶ್ರೀ- ಪ್ರೊ.ಆಶಾದೇವಿ

ವರದಿ: ಗುಲಾಬಚಂದ ಜಾಧವಗದಗ : ತಾಯಿ ತನ್ನ ಮಕ್ಕಳಿಗೆ ಎಂದೂ ಭೇದಭಾವ ಮಾಡಲ್ಲ.ಹಾಗೆಯೇ ಬೆಂಕಿ,ಗಾಳಿ,ನೀರು ನಿಸರ್ಗದ…

ಪಿಜಿ ಬಾಡಿಗೆ ಹಣ ಕೊಡದಿದ್ದಕ್ಕೆ ಮಾಲಿಕ ಮಾಡಿದ್ದೇನು?

ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.