ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಇಂದು ಪ್ಲಾಸ್ಮಾ ಚಿಕಿತ್ಸೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ಲಾಸ್ಮಾ ಚಿಕಿತ್ಸೆಯಿಂದಾಗಿ ಗಂಭೀರಸ್ಥಿತಿಯಲ್ಲಿರುವವರ ಪರಿಸ್ಥಿತಿಯನ್ನು ಶೋಚನೀಯ ಸ್ಥಿತಿಗೆ ಹೋಗದಂತೆ ತಡೆಯಬಹುದು. ನಾವು ಈ ಸಂಗತಿಯನ್ನು ಕಂಡುಕೊಂಡಿದ್ದೇವೆ ಎಂದರು.

ಎಲ್ ಎನ್ ಜೆ ಪಿ ಮತ್ತು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ ನೀಡಲಾಗಿದೆ. ಎಲ್ ಎನ್ ಜೆ ಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಕ್ಕೂ ಮುನ್ನಿಗಿಂತ ಸಾವಿನ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಕೊರೊನಾ ಸೋಂಕಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ಸಮಸ್ಯೆಯೆಂದರೆ, ಸೋಂಕಿತರಲ್ಲಿ ಆಮ್ಲಜನಕದ ಪ್ರಮಾಣ ಇದ್ದಕ್ಕಿದ್ದಂತೆ ಕೊರತೆಯಾಗುತ್ತದೆ. ಆಮ್ಲಜನಕದ ಪ್ರಮಾಣ ಶೇ. 95ರಷ್ಟು ಇರಬೇಕು. ಇದು ಶೇ. 90ಕ್ಕಿಂತ ಕಡಿಮೆಯಾದರೆ ಇದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಆಮ್ಲಜನಕದ ಪ್ರಮಾಣ ಶೇ. 85ಕ್ಕಿಂತ ಕಡಿಮೆಯಾದರೆ ತೀರಾ ಗಂಭೀರ ಎಂದು ಪರಿಗಣಿಸಲಾಗುತ್ತದೆ. ಶೇ. 90-85ರ ಪ್ರಮಾಣದ ಆಮ್ಲಜನಕ ಹೊಂದಿರುವವರು ತೀವ್ರ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಾರೆ ಎಂದರು.

Leave a Reply

Your email address will not be published. Required fields are marked *

You May Also Like

” ಶಿಕ್ಷಕ- ಮಕ್ಕಳಲ್ಲಿ ನವ ಚೇತನ ತುಂಬಿದ ವಿಷಯ ವೇದಿಕೆ ” ಚಿತ್ರಕಲೆ ಪಠ್ಯಗಳ ಜೀವಾಳ

ಉತ್ತರಪ್ರಭ ಸುದ್ದಿವಿಜಯಪುರ: ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಹಾಗು ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಸಹಕಾರಿಯಾಗಿದೆ ಅಲ್ಲದೇ ಪಠ್ಯಾಧಾರೀತ…

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್: ಸಿಎಂಗೆ ಜೊಲ್ಲೆ ಅಭಿನಂದನೆ

ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…