ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ ಆಸ್ಟ್ರಿಯಾ ದೇಶದ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ಕೊರೊನಾ ಸಂಕಷ್ಟದ ಸಮಯವಾದ್ದರಿಂದ ಮೊದಲಿಗೆ ಆನ್ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದ್ದು, ಜುಲೈ 22ರಿಂದ ಆಗಸ್ಟ್ 5ರವರೆಗೆ ಸ್ಕ್ರೀನಿಂಗ್ ನಡೆಯಲಿದೆ.

ಆನ್ಲೈನ್ ಸ್ಕ್ರೀನಿಂಗ್ ಮಾಡಲ್ಪಟ್ಟ ಚಿತ್ರಗಳು ಸ್ಪರ್ಧಾ ಕಣದಲ್ಲೂ ಇದ್ದು ಫಲಿತಾಂಶವನ್ನು ಆನಂತರ ಪ್ರಕಟಿಸಿ, ನೇರ ಪ್ರತ್ಯಕ್ಷ ಸಮಾರಂಭವನ್ನು ಆಯೋಜಿಸಲಾಗುತ್ತದೆ. ಹೀಗಾಗಿ ‘ಅಮೃತಮತಿ’ ಚಿತ್ರ ಸ್ಪರ್ಧಾಕಣಕ್ಕೂ ಆಯ್ಕೆಯಾಗಿದೆ.

‘ಅಮೃತಮತಿ’ ಚಿತ್ರವು 13ನೇ ಶತಮಾನದಲ್ಲಿ ಕನ್ನಡದ ಖ್ಯಾತ ಕವಿ ಜನ್ನ ಬರೆದ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿದೆ. ಮೂಲ ಕಥಾವಸ್ತುವನ್ನು ಮರು ವ್ಯಾಖ್ಯಾನ ಮಾಡಿ ಮರುಸೃಷ್ಟಿ ಮಾಡಲಾಗಿದೆ.

‘ಅಮೃತಮತಿ’ ಪಾತ್ರದಲ್ಲಿ ಖ್ಯಾತ ನಟಿ ಹರಿಪ್ರಿಯಾ ಅಭಿನಯಿಸಿದ್ದು, ಅವರಿಗೆ ‘ನೋಯ್ಡಾ ವಿಶ್ವ ಚಿತ್ರೋತ್ಸವ’ದಲ್ಲಿ ಈ ಪಾತ್ರಾಭಿನಯ ಕ್ಕೆ `ಶ್ರೇಷ್ಠ ನಟಿ’ ಪ್ರಶಸ್ತಿ ಬಂದಿದೆ.

ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಅಭಿನಯಿಸಿದ್ದು, ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್ ಸುಪ್ರಿಯಾ ರಾವ್, ವತ್ಸಲಾ ಮೋಹನ್, ಅಂಬರೀಶ್ ಸಾರಂಗಿ, ಭೂಮಿಕಾ ಲಕ್ಷ್ಮೀನಾರಾಯಣ್ ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಅಮೃತಮತಿ ಚಿತ್ರಕ್ಕಿದೆ.

Leave a Reply

Your email address will not be published. Required fields are marked *

You May Also Like

ರಜೆ ರದ್ದುಗೊಳಿಸಿ ಜೂ.19ರವರೆಗೆ ಸುಪ್ರೀಂ ಕೋರ್ಟ್ ಕಾರ್ಯ

ಇದೀಗ ಸುಪ್ರೀಂ ಕೋರ್ಟ್‌ ಕೂಡ ತಮ್ಮ ರಜೆಯನ್ನು ರದ್ದುಗೊಳಿಸಿ ಜೂನ್‌ 19ರ ವರೆಗೆ ಕಾರ್ಯನಿರ್ವಹಿಸಲಿದೆ.

ಇಂದು 7,012 ಪಾಸಿಟಿವ್!: ರಾಜ್ಯದ ಎಲ್ಲ ಜಿಲ್ಲೆಗಳ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ಪೆಟ್ರೋಲ್ ತೆರಿಗೆ ಇಳಿಕೆಗೆ ನೀರಸ ಪ್ರತಿಕ್ರಿಯೆ ತೋರಿದ ಸಿಎಂ

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಜನರು ತತ್ತರಗೊಂಡಿದ್ದು, ದುಬಾರಿಯಾಗಿರುವುದರಿಂದ ಸೆಸ್ ಇಳಿಕೆ ಮಾಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಆದರೆ, ಬಹುತೇಕ ರಾಜ್ಯಗಳಿಂದ ಸೆಸ್ ಇಳಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ