ರಾಯಚೂರ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 457ಕ್ಕೆ ಏರಿಕೆಯಾಗಿದೆ. ಈವರೆಗೆ 355 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 100 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ನಾಳೆಯಿಂದ ರಾಜ್ಯದಲ್ಲಿ ಏನಿರುತ್ತೆ?-ಏನಿರಲ್ಲ?: ಲಾಕ್ ಡೌನ್ ಸಡಿಲಿಕೆ ನಿಯಮಗಳೇನು?
ಈಗಾಗಲೇ ಕೇಂದ್ರ ಸರ್ಕಾರ ಲಾಕ್ ಡೌನ್ 4 ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೆ ಇಂದು ಸಂಪುಟ ಸಭೆ ಕರೆದ ಸಿಎಂ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದಾಗಿ ನಾಳೆಯಿಂದ ರಾಜ್ಯದಲ್ಲಿ ಏನೆಲ್ಲ ಆರಂಭವಾಗಲಿವೆ..?
ಸಹಕಾರ ಬ್ಯಾಂಕ್ ಗಳ ಮೂಲಕ ರೈತರಿಗೆ 20,810 ಕೋಟಿ ಬೆಳೆ ಸಾಲ-ಸಚಿವ ಸೋಮಶೇಖರ್
ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.