ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ ಪರೀಕ್ಷೆ ಬರೆದು ಪರೀಕ್ಷಾ ಕೇಂದ್ರದಿಂದ ಮನೆಗೆ ಮರಳಿದಾತ ಮನಿ ಸೇರಲೇ ಇಲ್ಲ. ಈಗ-ಆಗ ಬಂದಾನು ಅಂತ ಕಾದು ಕುಳಿತ ತಂದೆ-ತಾಯಿಯರಿಗೆ ಕೊನೆಗೂ ಆಘಾತ ನೀಡಿ ಹೋಗಿ ಬಿಟ್ಟ.
ನಿನ್ನೆ ಸಿದ್ದಪ್ಪನೊಂದಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಂದು ಸಹಪಾಠಿಯ ಅಗಲಿಕೆಯ ದುಗೂಡದಲ್ಲಿಯೇ ಪರೀಕ್ಷೆಗೆ ಹಾಜರಾದರು. ಇದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಿದ್ದಪ್ಪ ಜೀವನದ ಅಂತಿಮ ಪರೀಕ್ಷೆ ಮುಗಿಸಿ ನಪಾಸ್ ಆಗಿ ಹೋದ ಕಥೆ..!

ಮೊನ್ನೆಯಷ್ಟೆ ಕಲಕೇರಿಯ ಪರೀಕ್ಷಾ ಕೇಂದ್ರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಮನೆಗೆ ಮರಳುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು. ಇದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಿದ್ದಪ್ಪ ಸಾವನ್ನಪ್ಪಿದ. ತಂದೆ ಮಲ್ಲಪ್ಪ, ತಾಯಿ ಮಾದೇವಿ ಯವರಿಗೆ ಮಗನ ಅಗಲಿಕೆ ಮಾತ್ರ ಅರಗಿಸಿಕೊಳ್ಳಲು ಆಗುತ್ತಲೇ ಇಲ್ಲ. ಮೂವರು ಗಂಡು ಮಕ್ಕಳಲ್ಲಿ ಈ ಮನೆಗೆ ಸಿದ್ದಪ್ಪನೇ ಕಿರಿಯ ಪುತ್ರ. ಕಿರಿಯ ಮಗನ ಬಗ್ಗೆ ಕನಸಿನ ಮೂಟೆ ಹೊತ್ತ ತಂದೆಗೆ ಜವರಾಯ ನಿರಾಶೆ ಮಾಡಿದ್ದಾನೆ. ಸಿದ್ದಪ್ಪನ ಅಣ್ಣ ರಮೇಶ್ ಒಬ್ಬ ಪ್ರತಿಭಾವಂತ ವಿದ್ಯಾರ್ಥಿ. ಕಳೆದ ಮೂರು ವರ್ಷಗಳ ಹಿಂದಷ್ಟೆ ಬಾಗೇವಾಡಿ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆ ಹೊಂದಿದ್ದ. ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದಿದ್ದ. ರಮೇಶನಂತೆ ಸಿದ್ದಪ್ಪ ಕೂಡ ಉನ್ನತ ವ್ಯಾಸಾಂಗ ಮಾಡಬೇಕು ಎನ್ನುವ ಕನಸು ಮಲ್ಲಪ್ಪನದ್ದಾಗಿತ್ತು.

ಪಾಲಕರಿಗೆ ಉತ್ತರಪ್ರಭ ಮನವಿ

• ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯ ನೀಡಿದೆ. ಇದರ ಸದುಪಯೋಗ ಪಡೆದುಕೊಳ್ಳಿ

• ನಿಮ್ಮ ಮಕ್ಕಳನ್ನು ಬೈಕಿನಲ್ಲಿ ಪರೀಕ್ಷೆಗೆ ಕಳುಹಿಸಬೇಡಿ

• ನೀವೂ ಕೂಡ ನಿಮ್ಮ ಮಕ್ಕಳನ್ನು ಬೈಕಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗಬೇಡಿ

• ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ತುಂಬಿ.

ಈ ಘಟನೆಯಿಂದ ವಿದ್ಯಾರ್ಥಿಗಳ ಮನಸ್ಸು ಘಾಸಿಗೊಂಡಿದೆ. ಶಾಲೆಯಲ್ಲಿ 54 ವಿದ್ಯಾರ್ಥಿಗಳಲ್ಲಿ ಸಿದ್ದಪ್ಪ ಸಾವನ್ನಪ್ಪಿದರೆ, ಗಾಯಗೊಂಡ ಇನ್ನುಳಿದ ಇಬ್ಬರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದಾಗಿ 51 ವಿದ್ಯಾರ್ಥಿಗಳು ನಿನ್ನೆ ಪರೀಕ್ಷೆಗೆ ಹಾಜರಾದರು.

ಈ ಘಟನೆಯ ಕಾರಣ ನಿನ್ನೆಯಿಂದಲೇ ಶಾಲೆಯ ಸಿಬ್ಬಂಧಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಬಸ್ ಮೂಲಕ ಪರೀಕ್ಷೆಗೆ ಕಳುಹಿಸುವಂತೆ ಪಾಲಕರಿಗೆ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮೊಸಳೆ ಪತ್ತೆ ಕಾರ್ಯ

ಮಲಪ್ರಭಾ ನದಿಯಲ್ಲಿ ನಿನ್ನೆಯಷ್ಟೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿಯೇ ಮೊಸಳೆ ಕಂಡು ಬಂದಿತ್ತು.

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ಅವ್ಯವಸ್ಥೆಯ ಆಗರವಾದ ಗದಗ ಜಿಲ್ಲಾ ಆಸ್ಪತ್ರೆ; ಬೆಸಿಗೆಯಲ್ಲಿ ಬಾಣಂತಿ ಹಾಗೂ ಹಸುಗುಸುಗಳ ಪರದಾಟ

ಉತ್ತರಪ್ರಭ, ಗದಗ :ಜಿಲ್ಲೆಯ ಪ್ರಮುಖ ಆರೋಗ್ಯ ಕೇಂದ್ರವಾದ ಗದಗ ಜಿಲ್ಲಾ ಆಸ್ಪತ್ರೆ, ಪ್ರಮುಖವಾಗಿ ಬೆಸಿಗೆಯ ದಿನಗಳಲ್ಲಿ…

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.