ಬೆಂಗಳೂರು : ಕೊರೊನಾ ಭಯದಿಂದಾಗಿ ಜನರು ಸಾರಿಗೆ ಸಂಸ್ಥೆಯ ಬಸ್ ನಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ ಆದಾಯದಲ್ಲಿ ತೀವ್ರ ಇಳಿಕೆ ಕಾಣುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಸಿಬ್ಬಂದಿಗಳಿಗೆ ಯಾವುದೇ ಅನಾನುಕೂಲತೆ ಆಗದಂತೆ ಅನಗತ್ಯ ವೆಚ್ಚಗಳನ್ನು ಕಡಿಮೆಗೊಳಿಸುವ ಕುರಿತು ಹಲವಾರು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಯಾರೊಬ್ಬರೂ ಕರ್ತವ್ಯದಿಂದ ವಂಚಿತರಾಗಬಾರದು ಎಂಬ ಉದ್ಧೇಶದಿಂದ ಹಾಗೂ ಎಲ್ಲರಿಗೂ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತಾಗಲು ರೊಟೇಷನ್ ಆಧಾರದಲ್ಲಿ ಸಿಬ್ಬಂದಿಗಳನ್ನು ಇದೇ ಮೊದಲ ಬಾರಿಗೆ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಹೋಂ ಗಾರ್ಡ್ಸ್ (ಗೃಹ ರಕ್ಷಕ) ಸಿಬ್ಬಂದಿಗಳ ಬದಲಿಗೆ ಸಾರಿಗೆ ಸಂಸ್ಥೆಗಳಲ್ಲಿ ಆಸಕ್ತಿ ಹೊಂದಿರುವಂತಹ ಸಿಬ್ಬಂದಿಗಳನ್ನು ಭದ್ರತಾ ರಕ್ಷಕ ಹುದ್ದೆಗಳಿಗೆ ಉಪಯೋಗಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

55 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಅವರ ಆರೋಗ್ಯದ ಆಧಾರದ ಮೇಲೆ ಉದಾರವಾಗಿ ರಜೆ ಮಂಜೂರು ಮಾಡಲಾಗುವುದು. ಅಷ್ಟೇ ಅಲ್ಲ ಹೃದಯಬೇನೆ, ರಕ್ತದ ಒತ್ತಡಗಳಂತಹ ಕಾಯಿಲೆ ಇರುವರಿಗೆ ಅಗತ್ಯ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗುವುದು. ಗರ್ಭಿಣಿ ಸಿಬ್ಬಂದಿಗಳಿಗೆ ಲಘು ಕರ್ತವ್ಯದ ಮೇಲೆ ನಿಯೋಜಿಸಲು ಆದೇಶ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಸಿಡಿ ಪ್ರಕರಣ : ಸತ್ಯಾಂಶ ತಿಳಿಯದೆ ಹೆಸರು ಹೇಳಬಾರದು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ.

ಗಂಡು ಮಕ್ಕಳಿಗಾಗಿ ಸಿಕ್ಕಾಪಟ್ಟೆ ಹೆಣ್ಣು ಮಕ್ಕಳನ್ನು ಹೆರುವವರ ಮಧ್ಯೆ ಇದೊಂದು ಸ್ಟೋರಿ ಓದಿ!

ವಾಷಿಂಗ್ಟನ್ : ಗಂಡು ಬೇಕೆಂದು ಡಜನ್ ಗಟ್ಟಲೇ ಹೆಣ್ಣು ಮಕ್ಕಳನ್ನು ಹೆತ್ತವರ ಕಥೆಗಳನ್ನು ನಾವು ಕೇಳಿದ್ದೇವೆ. ಆದರೆ, ಇಲ್ಲೊಂದು ದಂಪತಿ ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಜನ ಗಂಡು ಮಕ್ಕಳನ್ನು ಹೆತ್ತಿದ್ದಾರೆ.

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.