ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ ಜುಲೈ 31ರ ವರೆಗೂ ಲಾಕ್ ಡೌನ್ ಹೇರಲಾಗಿದೆ. 

ಈ ಹಿಂದೆ ಹೇರಲಾಗಿದ್ದ ಲಾಕ್ ಡೌನ್ ಅವಧಿ ಭಾನುವಾರ ಪೂರ್ಣಗೊಳ್ಳಲ್ಲಿದ್ದು, ಮತ್ತೆ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಜಾರ್ಖಂಡ್ ಸರ್ಕಾರದ ಆದೇಶದ ಪ್ರಕಾರ ಲಾಕ್ ಡೌನ್ ಜಾರಿಯಲ್ಲಿದ್ದರೂ ಈಗ ನೀಡಿರುವ ವಿನಾಯಿತಿಗಳು ಮುಂದುವರೆಯಲಿವೆ. ರಾತ್ರಿಯ ಕರ್ಫ್ಯೂ ಎಂದಿನಂತೆ ಮುಂದುವರೆಯಲಿದೆ. ಜಾರ್ಖಂಡ್‌ ರಾಜ್ಯದಲ್ಲಿ ಜುಲೈ 1 ರಿಂದ ಜುಲೈ 31ರ ತನಕ ಲಾಕ್ ಡೌನ್ ಜಾರಿಗೆ ಬರಲಿದೆ. 

ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,261ಕ್ಕೆ ಏರಿಕೆಯಾಗಿದ್ದು, ಇದುವರೆಗೂ 12 ಜನರು ಮೃತಪಟ್ಟಿದ್ದಾರೆ. ಕೇಂದ್ರ ಗೃಹ ಇಲಾಖೆ ಘೋಷಿಸಿರುವ 5ನೇ ಹಂತದ ಲಾಕ್ ಡೌನ್  ಜೂನ್ 30ರ ತನಕ ದೇಶದಲ್ಲಿ ಜಾರಿಯಲ್ಲಿ ಇರುತ್ತದೆ. ಪಶ್ಚಿಮ ಬಂಗಾಳ ಸರ್ಕಾರ ಈಗಾಗಲೇ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದೆ. ದೆಹಲಿ ಸರ್ಕಾರ ಜುಲೈ 31ರ ತನಕ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಹೇಳಿದೆ.

Leave a Reply

Your email address will not be published. Required fields are marked *

You May Also Like

ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು

ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ನದಿ ಹಿನ್ನಿರಿನಿಂದ ನುಸುಳುತ್ತಿದ್ದಾರೆ ಜನ

ಗಡಿಯಿಂದ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಕಬಿನಿ ಹಿನ್ನೀರಿನ ಮೂಲಕ ಕೇರಳದಿಂದ ಜನರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೇರಳಾಗೆ ಕೂಲಿಗಾಗಿ ತೆರಳಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಕೇರಳದಿಂದ ಕರ್ನಾಟಕ ಬರುತ್ತಿದ್ದಾರೆ.

ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ.

ಬರೋಬ್ಬರಿ 11 ಗಂಟೆಗಳ ಕಾಲ ಮಾತುಕತೆ ನಡೆಸಿದ ಭಾರತ, ಚೀನಾ ಸೇನಾಧಿಕಾರಿಗಳು!

ಲಡಾಖ್: ಭಾರತ ಹಾಗೂ ಚೀನಾ ಸೇನಾಧಿಕಾರಿಗಳು ಬರೋಬ್ಬರಿ 11 ಗಂಟೆಗಳ ಕಾಲ ಗಡಿ ಸಂಘರ್ಷದ ಕುರಿತು…