ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ ಜುಲೈ 31ರ ವರೆಗೂ ಲಾಕ್ ಡೌನ್ ಹೇರಲಾಗಿದೆ. 

ಈ ಹಿಂದೆ ಹೇರಲಾಗಿದ್ದ ಲಾಕ್ ಡೌನ್ ಅವಧಿ ಭಾನುವಾರ ಪೂರ್ಣಗೊಳ್ಳಲ್ಲಿದ್ದು, ಮತ್ತೆ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಜಾರ್ಖಂಡ್ ಸರ್ಕಾರದ ಆದೇಶದ ಪ್ರಕಾರ ಲಾಕ್ ಡೌನ್ ಜಾರಿಯಲ್ಲಿದ್ದರೂ ಈಗ ನೀಡಿರುವ ವಿನಾಯಿತಿಗಳು ಮುಂದುವರೆಯಲಿವೆ. ರಾತ್ರಿಯ ಕರ್ಫ್ಯೂ ಎಂದಿನಂತೆ ಮುಂದುವರೆಯಲಿದೆ. ಜಾರ್ಖಂಡ್‌ ರಾಜ್ಯದಲ್ಲಿ ಜುಲೈ 1 ರಿಂದ ಜುಲೈ 31ರ ತನಕ ಲಾಕ್ ಡೌನ್ ಜಾರಿಗೆ ಬರಲಿದೆ. 

ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,261ಕ್ಕೆ ಏರಿಕೆಯಾಗಿದ್ದು, ಇದುವರೆಗೂ 12 ಜನರು ಮೃತಪಟ್ಟಿದ್ದಾರೆ. ಕೇಂದ್ರ ಗೃಹ ಇಲಾಖೆ ಘೋಷಿಸಿರುವ 5ನೇ ಹಂತದ ಲಾಕ್ ಡೌನ್  ಜೂನ್ 30ರ ತನಕ ದೇಶದಲ್ಲಿ ಜಾರಿಯಲ್ಲಿ ಇರುತ್ತದೆ. ಪಶ್ಚಿಮ ಬಂಗಾಳ ಸರ್ಕಾರ ಈಗಾಗಲೇ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದೆ. ದೆಹಲಿ ಸರ್ಕಾರ ಜುಲೈ 31ರ ತನಕ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಹೇಳಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ…

ಲಾರಿ, ಮಿನಿ ಬಸ್ ಡಿಕ್ಕಿ: 14 ಜನ ದುರ್ಮರಣ

ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೋವಿಡ್: ಬಿಗಡಾಯಿಸುತ್ತಿದೆ ಬೆಂಗಳೂರು :25 ದಿನದಲ್ಲಿ 38,213 ಪಾಸಿಟಿವ್, 765 ಸಾವು

ಜುಲೈ 1 ರಿಂದ ಜುಲೈ 25ರ ಅವಧಿಯಲ್ಲಿ ಬೆಂಗಳೂರಿನಲ್ಲಿ ಪಾಸಿಟಿವ್ ಸಂಖ್ಯೆ 8 ಪಟ್ಟು ಹೆಚ್ಚಿದ್ದು, ಔಷಧಿ, ವೈದ್ಯರು ಮತ್ತು ಇತರ ಸಿಬ್ಬಂದಿಯ ಕೊರತೆಯಿದೆ.

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.