ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ನಿನ್ನೆ ಒಂದೇ ದಿನ ದೇಶದಲ್ಲಿ ಸೋಂಕಿತರ ಸಂಖ್ಯೆ 18,552ರಷ್ಟಾಗಿದೆ.

ದಾಖಲೆಯ ಸೋಂಕಿತರೊಂದಿಗೆ ನಿನ್ನೆ 384 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಮೃತರ ಸಂಖ್ಯೆ 15,600ಕ್ಕೂ ಅಧಿಕವಾಗಿದೆ.

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 5,08,953 ಜನರಲ್ಲಿ ಸೋಂಕು ದೃಢಪಟ್ಟಿದೆ. ಸಾವಿನ ಸಂಖ್ಯೆ 15,685ಕ್ಕೆ ಏರಿದೆ. ಒಟ್ಟು ಪ್ರಕರಣಗಳಲ್ಲಿ 2,95,879 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ 1,97,387 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವುದು ಆತಂಕ ಮೂಡಿಸುತ್ತಿದೆ. ಮಹಾರಾಷ್ಟ್ರ ದೇಶದಲ್ಲಿಯೇ ಹೆಚ್ಚು 1,52,765 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ 7,106 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಅಲ್ಲಿ 77,240 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 2,492 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 74,622 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 957 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು

ನಗರದಲ್ಲಿ ಮತ್ತೆ ಹಲವು ಪ್ರದೇಶಗಳು ಸೀಲ್ ಡೌನ್ ಪಟ್ಟಿಗೆ!

ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ