ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ. ಹೀಗೆ ಆರ್ಥಿಕ ಸಂಕಷ್ಟಕ್ಕೆ ಒದ್ದಾಡುತ್ತಿರುವ ವಾಯುವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಕಡಿತಗೊಳಿಸಲು ಮುಂದಾಗಿದೆ.

ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ವಿಆರ್ ಎಸ್ (ವಾಲಂಟರಿ ರಿಟೈರ್ಮೆಂಟ್ ಸಿಸ್ಟಮ್) ನೀಡಲು ಮುಂದಾಗಿದೆ. ಜೊತೆಗೆ ನಷ್ಟ ಸರಿಪಡಿಸಲು ಸಂಸ್ಥೆಯಲ್ಲಿನ ಬಡ್ತಿ ಹೊಂದುವ ಹುದ್ದೆಗಳ ಕಡಿತ ಹಾಗೂ ವಿಲೀನ ಮಾಡಲು ಮುಂದಾಗಿದೆ.

ಈ ಕುರಿತು ಸಂಸ್ಥೆ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಸೋಂಕಿನಿಂದ ವೃದ್ಧರೇ ಹೆಚ್ಚಾಗಿ ಬಲಿಯಾಗುತ್ತಿರುವುದರಿಂದಾಗಿ ಕೆಲಸ ಮಾಡುವ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ವಿ ಆರ್ ಎಸ್ ನೀಡಲು ಮುಂದಾಗಿದೆ. ಆದರೆ, ಈ ನಿರ್ಧಾರವನ್ನು ಸಿಬ್ಬಂದಿಗಳು ವಿರೋಧಿಸುತ್ತಿದ್ದಾರೆ. ಅನಾವಶ್ಯಕ ಖರ್ಚುಗಳಿಗೆ ಸರ್ಕಾರ ಬ್ರೇಕ್ ಹಾಕಲಿ ಎಂದು ಸಾರಿಗೆ ಸಂಸ್ಥೆಯ ಸಿಬ್ಬಂದಿ ಹೇಳುತ್ತಾರೆ.

ಕೊರೊನಾ ಬಂದ ನಂತರ ಕೇಂದ್ರ ಸರ್ಕಾರ ನೌಕರರನ್ನು ಕೆಲಸದಿಂದ ತೆಗೆಯದಂತೆ ಆದೇಶ ಹೊರಡಿಸಿದೆ. ಆದರೆ, ಸಾರಿಗೆ ಸಂಸ್ಥೆ ಈ ನಿರ್ಧಾರ ಕೈಗೊಳ್ಳುಲು ಮುಂದಾಗಿರುವುದು ಮಾತ್ರ ನೌಕರ ವಿರೋಧಿ ನೀತಿಯಾಗಿದೆ.

Leave a Reply

Your email address will not be published. Required fields are marked *

You May Also Like

ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ: ಗದಗ ಜಿಲ್ಲೆಯ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆ ಅಮಾನತು

ಕೃಷಿ ಪರಿಕರಗಳ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿರುವುದು ದೃಢಪಟ್ಟಿರುತ್ತದೆ.

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…

ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮೊಸಳೆ ಪತ್ತೆ ಕಾರ್ಯ

ಮಲಪ್ರಭಾ ನದಿಯಲ್ಲಿ ನಿನ್ನೆಯಷ್ಟೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿಯೇ ಮೊಸಳೆ ಕಂಡು ಬಂದಿತ್ತು.