ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ. ಹೀಗೆ ಆರ್ಥಿಕ ಸಂಕಷ್ಟಕ್ಕೆ ಒದ್ದಾಡುತ್ತಿರುವ ವಾಯುವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಕಡಿತಗೊಳಿಸಲು ಮುಂದಾಗಿದೆ.

ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ವಿಆರ್ ಎಸ್ (ವಾಲಂಟರಿ ರಿಟೈರ್ಮೆಂಟ್ ಸಿಸ್ಟಮ್) ನೀಡಲು ಮುಂದಾಗಿದೆ. ಜೊತೆಗೆ ನಷ್ಟ ಸರಿಪಡಿಸಲು ಸಂಸ್ಥೆಯಲ್ಲಿನ ಬಡ್ತಿ ಹೊಂದುವ ಹುದ್ದೆಗಳ ಕಡಿತ ಹಾಗೂ ವಿಲೀನ ಮಾಡಲು ಮುಂದಾಗಿದೆ.

ಈ ಕುರಿತು ಸಂಸ್ಥೆ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಸೋಂಕಿನಿಂದ ವೃದ್ಧರೇ ಹೆಚ್ಚಾಗಿ ಬಲಿಯಾಗುತ್ತಿರುವುದರಿಂದಾಗಿ ಕೆಲಸ ಮಾಡುವ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ವಿ ಆರ್ ಎಸ್ ನೀಡಲು ಮುಂದಾಗಿದೆ. ಆದರೆ, ಈ ನಿರ್ಧಾರವನ್ನು ಸಿಬ್ಬಂದಿಗಳು ವಿರೋಧಿಸುತ್ತಿದ್ದಾರೆ. ಅನಾವಶ್ಯಕ ಖರ್ಚುಗಳಿಗೆ ಸರ್ಕಾರ ಬ್ರೇಕ್ ಹಾಕಲಿ ಎಂದು ಸಾರಿಗೆ ಸಂಸ್ಥೆಯ ಸಿಬ್ಬಂದಿ ಹೇಳುತ್ತಾರೆ.

ಕೊರೊನಾ ಬಂದ ನಂತರ ಕೇಂದ್ರ ಸರ್ಕಾರ ನೌಕರರನ್ನು ಕೆಲಸದಿಂದ ತೆಗೆಯದಂತೆ ಆದೇಶ ಹೊರಡಿಸಿದೆ. ಆದರೆ, ಸಾರಿಗೆ ಸಂಸ್ಥೆ ಈ ನಿರ್ಧಾರ ಕೈಗೊಳ್ಳುಲು ಮುಂದಾಗಿರುವುದು ಮಾತ್ರ ನೌಕರ ವಿರೋಧಿ ನೀತಿಯಾಗಿದೆ.

Leave a Reply

Your email address will not be published. Required fields are marked *

You May Also Like

ಸಮಯ ಪ್ರಜ್ಞೆ ಮರೆತ ಪೊಲೀಸರು : ಪೊಲೀಸರಿಂದಲೇ ರೋಡ್ ಬ್ಲಾಕ್, ಸಂಚಾರಕ್ಕೆ ಅಡಚಣೆ

ಉತ್ತರಪ್ರಭ ಗದಗ: ನಗರದ (ಬಿಎಸ್ಎನ್ಎಲ್ ) ಕಛೇರಿಯ ಎದುರು ಪಂಚರಹೊಂಡ ವೃತ್ತದ ಮಧ್ಯದಲ್ಲೇ ಪೊಲೀಸ್ ಬ್ಯಾರಿಗೆಡ್…

ಗದಗ ಜಿಲ್ಲೆಗೆ ಕೊರೊನಾ ಗ್ರಹಣ : ಇಂದು 19 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199…

ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲ ಆಯ್ಕೆಯಾಗಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

ಸಂಪತ್ ರಾಜ್ ನನ್ನು ಪಕ್ಷದಿಂದ ಉಚ್ಛಾಟಿಸಬೇಕು – ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.