ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹತ್ತು ಮತ್ತು ಹನ್ನೆರಡನೆ ತರಗತಿಯ ಇನ್ನುಳಿದ ಪರೀಕ್ಷೆಗಳನ್ನು ರದ್ದುಗೊಳಿಸಿದ ಬಳಿಕ ಮಾಧ್ಯಮಗಳಲ್ಲಿ 10ನೇ ತರಗತಿ ಪರೀಕ್ಷೆ ಬಗ್ಗೆ ತಪ್ಪು ವರದಿ ಪ್ರಕಟವಾಗಿದೆ. ಈಗಾಗಲೇ ಮುಗಿದಿರುವ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕ ಮತ್ತು ಇಂಟರ್ನಲ್ ಅಸ್ಸೆಸ್ಸ್ ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಲೆಕ್ಕಹಾಕಲಾಗುತ್ತದೆ ಎಂದು ತಿಳಿಸಿದೆ.

ಇನ್ನು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದಿಲ್ಲ. ಮೌಲ್ಯಮಾಪನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಫಲಿತಾಂಶ ಪ್ರಕಟಿಸಲಾಗುತ್ತದೆ ಮತ್ತು ಅದು ಅಂತಿಮ ಎಂದು ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ವೈರಸ್ ತನಿಖೆಗೆ ಒಪ್ಪಿಗೆ ಸೂಚಿಸಿತೆ ಚೀನಾ?

ಕೊರೋನಾ ವೈರಸ್ ಮೂಲದ ಬಗ್ಗೆ ತನಿಖೆಗೆ ಚೀನಾ ಒಪ್ಪಿಕೊಂಡಿದೆಯೇ? ಎಂಬ ಪ್ರಶ್ನೆಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಿವೋ ಲಿಜಿಯಾನ್ ಪ್ರತಿಕ್ರಿಯಿಸಿದ್ದಾರೆ.

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಇಂದು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಮತದಾನ ಶರುವಾಗಿದ್ದು ಗದಗ ಜಿಲ್ವಿಲೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇಕಡಾವಾರು…

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.