ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ ಅನುಭವಿಸಿದ್ದಾರೆ. ಇಂದು ಪ್ರದೇಶ ಕುರುಬರ ಸಂಘಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಬೆಂಬಲಿಗರು ಜಯ ಗಳಿಸಿದ್ದು, ಈಶ್ವರಪ್ಪ ಬೆಂಬಲಿಗರು ಸೋತಿದ್ದಾರೆ.

ಆಡಳಿತ ಪಕ್ಷದ ಕೆ.ಎಸ್‌. ಈಶ್ವರಪ್ಪ ಬಣ ಒಂದೇ ಒಂದು ಸ್ಥಾನ ಗೆಲ್ಲದೆ ಸೋಲು ಕಂಡಿದ್ದಾರೆ. ಇದರಿಂದಾಗಿ ಈಶ್ವರಪ್ಪ ಅವರ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ. ಇಂದು ರಾಜ್ಯ ಕುರುಬರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಹಲವು ಹುದ್ದೆಗಳಿಗೆ ಚುನಾವಣೆ ನಡೆದಿತ್ತು. ಸಿದ್ದರಾಮಯ್ಯ ಬೆಂಬಲಿತ ಅಭ್ಯರ್ಥಿ ಬಳ್ಳಾರಿ ಮೂಲದ ಕೃಷ್ಣ ಎಂಬುವವರು 83 ಮತಗಳಿಂದ ಜಯ ಸಾಧಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇನ್ನುಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರು 81 ಮತಗಳನ್ನು ಗಳಿಸಿ ಜಯಗಳಿಸುವುದರೊಂದಿಗೆ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಮೈಸೂರು ಸುಬ್ಬಣ್ಣ (84 ಮತಗಳು)‌, ಖಜಾಂಚಿಯಾಗಿ ದೇವರಾಜು (84 ಮತಗಳು), ಹಿರಿಯ ಉಪಾಧ್ಯಕ್ಷರಾಗಿ ಈರಣ್ಣ ಝಳಕಿ (83 ಮತಗಳು), ಜಗದೀಶ (78ಮತಗಳು), ಬಸವರಾಜ್ ಬಸಲಗುಂದಿ (75 ಮತಗಳು), ರೇಖಾ ಹುಲಿಯಪ್ಪಗೌಡ (85 ಮತಗಳು) ಆಯ್ಕೆಯಾಗಿದ್ದಾರೆ.

ಅಲ್ಲದೇ, ಸಂಘದ ಉಪಾಧ್ಯಕರಾಗಿ ಕೃಷ್ಣ ಕುಮಾರ್ (78 ಮತಗಳು), ಪುಟ್ಟಬಸವಯ್ಯ (78 ಮತಗಳು), ಮಿರ್ಜಾಪುರ ಮಹಾದೇವಪ್ಪ (76 ಮತಗಳು), ಎಂ.ಸಿ.ರಾಜಣ್ಣ (81 ಮತಗಳು), ವೆಂಕಟರಮಣಪ್ಪ(75 ಮತಗಳು) ಹಾಗೂ ಶಂಕರ ವಿಠೋಬ ಹೆಗಡೆ (79 ಮತಗಳು) ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ರೂ 10,000 ಪರಿಹಾರಕ್ಕೆ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆ ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅವರಿಗೆ ತಿಂಗಳಿಗೆ…

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…