ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಜು. 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟು ಹಬ್ಬವಿದೆ. ಈ ವರ್ಷ ಕೊರೊನಾ ಇರುವುದರಿಂದ ಅಭಿಮಾನಿಗಳಿಗೆ ಮನೆಯ ಹತ್ತಿರ ಬರದಂತೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರೀತಿಯ ಸ್ನೇಹಿತರೇ ಕೊರೊನಾ ಸೋಂಕಿನಿಂದಾಗಿ ಈ ವರ್ಷದ ನನ್ನ ಹುಟ್ಟು ಹಬ್ಬವನ್ನು ನೇರವಾಗಿ ನಿಮ್ಮನ್ನು ಭೇಟಿ ಮಾಡಿ ಆಚರಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಕ್ಷಮೆಯಿರಲಿ. ನಿಮ್ಮ ಪ್ರೀತಿ ಮತ್ತು ಹಾರೈಕೆ ಹಾಗೂ ಶುಭಾಶಯ ಸದಾ ನನ್ನ ಜೊತೆಯಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ನನ್ನೆಲ್ಲಾ ಅಭಿಮಾನಿಗಳೇ, ಬಂದುಗಳೇ, ಸ್ನೇಹಿತರೆ ಹಾಗೂ ಹಿತೈಷಿಗಳೇ ಈ ಕೊರೊನಾದ ಸಂಕಷ್ಟದ ಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲೂ ನೀವು ನೊಂದವರ, ಅಸಹಾಯಕರ, ಹಸಿದವರ ಬೆಂಬಲಕ್ಕೆ ನಿಂತಿರಿ. ಇದಕ್ಕೆ ಯಾವ ಪ್ರಚಾರವನ್ನೂ ಬಯಸದೆ ಸದ್ದುಗದ್ದಲವಿಲ್ಲದೆ, ನಿಮ್ಮ ಮಾನವೀಯತೆಯನ್ನು ತೋರಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ. ನಿಮ್ಮ ಕಾರ್ಯಗಳಿಗಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳಿಗೆ ನೇಮಕವಾದ ಆಡಳಿತಾಧಿಕಾರಿಗಳ ಕರ್ತವ್ಯಗಳೇನು..?

ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.

ಪೊಲೀಸರಿಗೆ ವಾಚಮನ್ ಎಂದು ಆವಾಜ್ ಹಾಕಿದ ಯುವಕ

ಲಾಕ್ ಡೌನ್ ಇದ್ದಾಗಲೂ ಅನವಶ್ಯಕವಾಗಿ ಬೈಕ್ ನಲ್ಲಿ ಓಡಾಡುತ್ತಿದ್ದ ಯುವಕನಿಗೆ ಓಡಾಡದಂತೆ ಸೂಚನೆ ನೀಡಿದ ಪೊಲೀಸರಿಗೆ ಯುವಕ ನೀವು ವಾಚಮನ್ ಇದ್ದ ಹಾಗೆ ಎಂದು ಆವಾಜ್ ಹಾಕಿದ್ದಾನೆ.

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ!: ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಹಿಳಾ ವೈದ್ಯೆಯ ತರಾಟೆ!

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ಕೊರೊನಾ ಸೋಂಕಿತರಿಗೆ ಈ ಔಷಧಿ ನೀಡಬಾರದಂತೆ

ರೋಗಿಗಳು ಎಷ್ಟೇ ಅನಾರೋಗ್ಯಕ್ಕೆ ತುತ್ತಾಗಿದ್ದರೂ ಅವರಿಗೆ ಗಿಲೀಡ್‌ನ ರೆಮ್ಡೆಸಿವಿರ್ ಔಷಧ ನೀಡುವುದನ್ನು ಶಿಫಾರಸು ಮಾಡುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.