ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಜು. 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟು ಹಬ್ಬವಿದೆ. ಈ ವರ್ಷ ಕೊರೊನಾ ಇರುವುದರಿಂದ ಅಭಿಮಾನಿಗಳಿಗೆ ಮನೆಯ ಹತ್ತಿರ ಬರದಂತೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರೀತಿಯ ಸ್ನೇಹಿತರೇ ಕೊರೊನಾ ಸೋಂಕಿನಿಂದಾಗಿ ಈ ವರ್ಷದ ನನ್ನ ಹುಟ್ಟು ಹಬ್ಬವನ್ನು ನೇರವಾಗಿ ನಿಮ್ಮನ್ನು ಭೇಟಿ ಮಾಡಿ ಆಚರಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಕ್ಷಮೆಯಿರಲಿ. ನಿಮ್ಮ ಪ್ರೀತಿ ಮತ್ತು ಹಾರೈಕೆ ಹಾಗೂ ಶುಭಾಶಯ ಸದಾ ನನ್ನ ಜೊತೆಯಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ನನ್ನೆಲ್ಲಾ ಅಭಿಮಾನಿಗಳೇ, ಬಂದುಗಳೇ, ಸ್ನೇಹಿತರೆ ಹಾಗೂ ಹಿತೈಷಿಗಳೇ ಈ ಕೊರೊನಾದ ಸಂಕಷ್ಟದ ಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲೂ ನೀವು ನೊಂದವರ, ಅಸಹಾಯಕರ, ಹಸಿದವರ ಬೆಂಬಲಕ್ಕೆ ನಿಂತಿರಿ. ಇದಕ್ಕೆ ಯಾವ ಪ್ರಚಾರವನ್ನೂ ಬಯಸದೆ ಸದ್ದುಗದ್ದಲವಿಲ್ಲದೆ, ನಿಮ್ಮ ಮಾನವೀಯತೆಯನ್ನು ತೋರಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ. ನಿಮ್ಮ ಕಾರ್ಯಗಳಿಗಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಆನ್ಲೈನ್ ಅಜಿ೯ – ಸವಿತಾ ಮೇಟಿ

ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ…

ಕಣ್ಮನ ಸೆಳೆದ ಗೊಂಬೆಗಳ ಕುಣಿತ- ಗಣೇಶ ವಿಸರ್ಜನೆ ರಂಗು…!

ವರದಿ: ಗುಲಾಬಚಂದ ಜಾಧವ ಉತ್ತರಪ್ರಭ ಸುದ್ದಿಆಲಮಟ್ಟಿ: ಬ್ರಹತ್ತಾಕಾರದ ರಂಗು ರಂಗಿನ ಗೊಂಬೆಗಳ ನಲಿದಾಟ. ಹಲಿಗೆ ವಾದ್ಯ…

ಇನ್ಮುಂದೇ ಚುನಾಯಿತ ಪ್ರತಿನಿಧಿಗಳು ಕೊರೊನಾ ವಾರಿಯರ್ಸ್

ಬೆಂಗಳೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್ ಕೊವಿಡ್ ಲಸಿಕೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.