ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಜು. 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟು ಹಬ್ಬವಿದೆ. ಈ ವರ್ಷ ಕೊರೊನಾ ಇರುವುದರಿಂದ ಅಭಿಮಾನಿಗಳಿಗೆ ಮನೆಯ ಹತ್ತಿರ ಬರದಂತೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರೀತಿಯ ಸ್ನೇಹಿತರೇ ಕೊರೊನಾ ಸೋಂಕಿನಿಂದಾಗಿ ಈ ವರ್ಷದ ನನ್ನ ಹುಟ್ಟು ಹಬ್ಬವನ್ನು ನೇರವಾಗಿ ನಿಮ್ಮನ್ನು ಭೇಟಿ ಮಾಡಿ ಆಚರಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಕ್ಷಮೆಯಿರಲಿ. ನಿಮ್ಮ ಪ್ರೀತಿ ಮತ್ತು ಹಾರೈಕೆ ಹಾಗೂ ಶುಭಾಶಯ ಸದಾ ನನ್ನ ಜೊತೆಯಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ನನ್ನೆಲ್ಲಾ ಅಭಿಮಾನಿಗಳೇ, ಬಂದುಗಳೇ, ಸ್ನೇಹಿತರೆ ಹಾಗೂ ಹಿತೈಷಿಗಳೇ ಈ ಕೊರೊನಾದ ಸಂಕಷ್ಟದ ಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲೂ ನೀವು ನೊಂದವರ, ಅಸಹಾಯಕರ, ಹಸಿದವರ ಬೆಂಬಲಕ್ಕೆ ನಿಂತಿರಿ. ಇದಕ್ಕೆ ಯಾವ ಪ್ರಚಾರವನ್ನೂ ಬಯಸದೆ ಸದ್ದುಗದ್ದಲವಿಲ್ಲದೆ, ನಿಮ್ಮ ಮಾನವೀಯತೆಯನ್ನು ತೋರಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ. ನಿಮ್ಮ ಕಾರ್ಯಗಳಿಗಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

Как скачать приложение Мостбет в Казахстане на Android и iOS Информация от компаний Астаны

Мостбет КЗ официальный сайт Mostbet KZ, регистрация и бонусы Content Финансовые транзакции:…

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ಶಿರಹಟ್ಟಿ ಮಾಬುಸುಬಾನಿ ಉರುಸು ರದ್ದು

ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.