ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಮುಂದಾಗಿದ್ದಾರೆ. ಈ ಕುರಿತು ಸರ್ವೆ ಮಾಡಿಸಿ ಜಿಲ್ಲೆಯಲ್ಲಿನ ಸರ್ಕಾರದ ಆಸ್ತಿಯನ್ನು ನಿಗದಿತ ಸಾರ್ವಜನಿಕ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್‌ ಅವರ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ.

ತಾಲೂಕಿನ ಮುಗದ ಗ್ರಾಮದಲ್ಲಿ ಇಲಾಖೆಗೆ ಸೇರಿದ ಒಂದು ಎಕರೆ ಜಾಗವನ್ನು ಶುಕ್ರವಾರ ಜಿಲ್ಲಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಭೂಮಾಪನ ಇಲಾಖೆ ಅಧಿಕಾರಿಗಳು ಸ್ಥಳದ ಅಳತೆ ಮಾಡಿ ಗಡಿ ಗುರುತಿಸಿದ್ದಾರೆ. 1970 ರಲ್ಲಿ ಮುಗದ ಗ್ರಾಮದಲ್ಲಿ ಪೊಲೀಸ್ ಠಾಣೆ ಮತ್ತು 12 ಕ್ವಾರ್ಟರ್ಸ್ ಗಳು ಇದ್ದವು. ಈ ಠಾಣೆ ರದ್ದಾದ ನಂತರ ಕಟ್ಟಡಗಳು ಖಾಲಿ ಬಿದ್ದಿದ್ದವು. ಆದರೆ, ಈ ಕಟ್ಟಡಗಳಲ್ಲಿ ಹಲವರು ಅಕ್ರಮವಾಗಿ ನೆಲೆಸಿದ್ದರು. ಆ ಜಾಗವನ್ನು ಸದ್ಯ ಪೊಲೀಸ್ ವರಿಷ್ಠಾಧಿಕಾರಿ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಇಲಾಖೆಗೆ ಸೇರಿದ ಬಹಳಷ್ಟು ಜಾಗಗಳು ಜಿಲ್ಲೆಯಲ್ಲಿದ್ದು, ಅವುಗಳನ್ನು ಹಲವರು ಅತಿಕ್ರಮಿಸಿದ್ದಾರೆ. ಇಂಥ ಜಾಗಗಳನ್ನು ವಶಕ್ಕೆ ಪಡೆದು ಇಲಾಖೆ ಉದ್ದೇಶಕ್ಕೆ ಬಳಸಿಕೊಳ್ಳಲಾಗುವುದು. ಅದರಂತೆಯೇ ಮುಗದ ಗ್ರಾಮದಲ್ಲಿರುವ ಇಲಾಖೆ ಜಾಗದಲ್ಲಿ ಪೊಲೀಸ್ ಸಿಬ್ಬಂದಿಗೆ ವಸತಿ ಸಮುಚ್ಚಯ ನಿರ್ಮಿಸುವ ಉದ್ದೇಶವಿದೆ. ಈ ಕುರಿತಂತೆ ಅನುಮತಿ ಕೋರಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿ ಕೋಳಿಗಾಗಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ

ಕ್ವಾರಂಟೈನ್ ಕೇಂದ್ರದಲ್ಲಿ ತಮಗೆ ಚಿಕನ್ ಕೊಡಲಿಲ್ಲ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

‘ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ, ನೇಪಾಳಿ’ : ನೇಪಾಳ ಪ್ರಧಾನಿ ಕಿಡಿ

‘ನಿಜವಾದ ಅಯೋಧ್ಯೆ ಇರುವುದು ಭಾರತದಲ್ಲಲ್ಲ ನೇಪಾಳದಲ್ಲಿ. ದೇವರು ರಾಮ ಭಾರತೀಯನಲ್ಲ, ನೇಪಾಳಿ’ ಎಂದು ನೇಪಾಳ ಪ್ರಧಾನಿ ಪ್ರತಿಪಾದಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಚುರುಕು: 14 ಕಣ್ಗಾವಲು ಆರೋಗ್ಯ ತಂಡಗಳ ರಚನೆ

ಜಿಲ್ಲಾ ಮಟ್ಟದ 14 ಕಣ್ಗಾವಲು ಸಾರ್ವಜನಿಕ ಆರೋಗ್ಯ ಸುರಕ್ಷತಾ ತಂಡಗಳ ರಚಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.