ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ ಮಾಡಿ ಕೊಡುತ್ತಿದೆ. ಟಿಕ್ಟಾಲಕ್ ಮೂಲಕ ಚಿರಪರಿಚತಳಾಗಿದ್ದ ಸಿಯಾ ಚಿಕ್ಕ ವಯಸ್ಸಿನಲ್ಲಿಯೇ ಅತ್ಮಹತ್ಯೆ ಮಾಡಿಕೊಂಡು ಕುಟುಂಬಸ್ಥರಿಗೂ ಹಾಗೂ ಅಭಿಮಾನಿಗಳು ದೊಡ್ಡ ಶಾಕ್ ನೀಡಿದ್ದಳು. ಕಳೆದ ಎರಡು ದಿನಗಳ ಜೂ. 25ರಂದು ಸಿಯಾ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ನಿರ್ಧಾರಕ್ಕೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ.

ದೆಹಲಿಯ ನಿವಾಸಿಯಾಗಿದ್ದ ಸಿಯಾ ತಮ್ಮ ಟಿಕ್ಟಾುಕ್, ಡ್ಯಾನ್ಸ್, ಫೋಟೋ ಶೂಟ್, ಡಬ್ಬಿಂಗ್ ಮೂಲಕ ಅಪಾರ ಫಾಲೋವರ್ಸ್ ಗಳನ್ನು ಹೊಂದಿದ್ದಳು. ಇಷ್ಟೊಂದು ಹೆಸರು ಮಾಡಿದ್ದ ಸಿಯಾ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಯಾ ಮೃತದೇಹ ಆಕೆಯ ಕೋಣೆಯಲ್ಲಿ ಪತ್ತೆಯಾಗಿತ್ತು. ಬುಧವಾರ ಇನ್ಸ್ಟಾರಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದ ಸಿಯಾಳ ಈ ನಿರ್ಧಾರಕ್ಕೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಸಿಯಾ, ಮ್ಯಾನೇಜರ್ ಅರ್ಜುನ್ ಸಿರಿನ್ ಹಾಗೂ ಕುಟುಂಬಸ್ಥರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಿಯಾಳಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪತ್ರಿಕೆಗಳಲ್ಲಿಯೂ ಸುದ್ದಿ ಪ್ರಕಟವಾಗಿದೆ. ಅಪರಿಚಿತರ ಫೋನ್ ಕಾಲ್ ಗಳಿಂದ ಬೇಸತ್ತು ಸಿಯಾ ನೇಣಿಗೆ ಶರಣಾಗಿರಬಹುದೆಂದು ಎಂಬ ಅನುಮಾನಗಳು ದಟ್ಟವಾಗಿವೆ. ಈ ಅನುಮಾನಗಳ ಕುರಿತು ಪೊಲೀಸರು ಇದುವರೆಗೂ ಯಾವುದೇ ಸ್ಪಷ್ಟನೆಯನ್ನ ಸಹ ನೀಡಿಲ್ಲ.

1 comment
  1. ಯಾಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕ್ಬರದು sir..

Leave a Reply

Your email address will not be published. Required fields are marked *

You May Also Like

ಕೊರೊನಾ ಎಫೆಕ್ಟ್ – ಪೊಲೀಸರ ಸಂಖ್ಯೆಯಲ್ಲಿ ಕ್ಷೀಣ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಿಯರ್ಸ್ ನ್ನು ಇದು ಬಿಡುತ್ತಿಲ್ಲ. ಸದ್ಯ…

ಪಿಜಿ ಬಾಡಿಗೆ ಹಣ ಕೊಡದಿದ್ದಕ್ಕೆ ಮಾಲಿಕ ಮಾಡಿದ್ದೇನು?

ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.