ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ ಮಾಡಿ ಕೊಡುತ್ತಿದೆ. ಟಿಕ್ಟಾಲಕ್ ಮೂಲಕ ಚಿರಪರಿಚತಳಾಗಿದ್ದ ಸಿಯಾ ಚಿಕ್ಕ ವಯಸ್ಸಿನಲ್ಲಿಯೇ ಅತ್ಮಹತ್ಯೆ ಮಾಡಿಕೊಂಡು ಕುಟುಂಬಸ್ಥರಿಗೂ ಹಾಗೂ ಅಭಿಮಾನಿಗಳು ದೊಡ್ಡ ಶಾಕ್ ನೀಡಿದ್ದಳು. ಕಳೆದ ಎರಡು ದಿನಗಳ ಜೂ. 25ರಂದು ಸಿಯಾ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ನಿರ್ಧಾರಕ್ಕೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ.

ದೆಹಲಿಯ ನಿವಾಸಿಯಾಗಿದ್ದ ಸಿಯಾ ತಮ್ಮ ಟಿಕ್ಟಾುಕ್, ಡ್ಯಾನ್ಸ್, ಫೋಟೋ ಶೂಟ್, ಡಬ್ಬಿಂಗ್ ಮೂಲಕ ಅಪಾರ ಫಾಲೋವರ್ಸ್ ಗಳನ್ನು ಹೊಂದಿದ್ದಳು. ಇಷ್ಟೊಂದು ಹೆಸರು ಮಾಡಿದ್ದ ಸಿಯಾ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಯಾ ಮೃತದೇಹ ಆಕೆಯ ಕೋಣೆಯಲ್ಲಿ ಪತ್ತೆಯಾಗಿತ್ತು. ಬುಧವಾರ ಇನ್ಸ್ಟಾರಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದ ಸಿಯಾಳ ಈ ನಿರ್ಧಾರಕ್ಕೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಸಿಯಾ, ಮ್ಯಾನೇಜರ್ ಅರ್ಜುನ್ ಸಿರಿನ್ ಹಾಗೂ ಕುಟುಂಬಸ್ಥರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಿಯಾಳಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪತ್ರಿಕೆಗಳಲ್ಲಿಯೂ ಸುದ್ದಿ ಪ್ರಕಟವಾಗಿದೆ. ಅಪರಿಚಿತರ ಫೋನ್ ಕಾಲ್ ಗಳಿಂದ ಬೇಸತ್ತು ಸಿಯಾ ನೇಣಿಗೆ ಶರಣಾಗಿರಬಹುದೆಂದು ಎಂಬ ಅನುಮಾನಗಳು ದಟ್ಟವಾಗಿವೆ. ಈ ಅನುಮಾನಗಳ ಕುರಿತು ಪೊಲೀಸರು ಇದುವರೆಗೂ ಯಾವುದೇ ಸ್ಪಷ್ಟನೆಯನ್ನ ಸಹ ನೀಡಿಲ್ಲ.

1 comment
  1. ಯಾಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕ್ಬರದು sir..

Leave a Reply

Your email address will not be published. Required fields are marked *

You May Also Like

ಬಿಜೆಪಿಯಿಂದ ಎಂಎಲ್ಸಿ ಆಗಬೇಕಂತಾರಾ ವಾಟಾಳ್ ನಾಗರಾಜ್..?

ನ್ನಡಪರ ಹೋರಾಟಗಾರ, ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಿಜೆಪಿ ಸೇರ್ತಾರಾ..? ಹೀಗೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ.

ದೇಶದಲ್ಲಿ ಇಳಿಮುಖದತ್ತ ಹೆಜ್ಜೆ ಹಾಕಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಇಲ್ಲಿಯವರೆಗೂ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತ ಆತಂಕ ಮೂಡಿಸಿದ್ದ ಮಹಾಮಾರಿ, ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದು, ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ.

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.

ಸಚಿವ ಸುಧಾಕರ್ ಪತ್ನಿ, ಪುತ್ರಿಗೂ ಕೊರೊನಾ ಪಾಸಿಟಿವ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ…