ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ ಮಾಡಿ ಕೊಡುತ್ತಿದೆ. ಟಿಕ್ಟಾಲಕ್ ಮೂಲಕ ಚಿರಪರಿಚತಳಾಗಿದ್ದ ಸಿಯಾ ಚಿಕ್ಕ ವಯಸ್ಸಿನಲ್ಲಿಯೇ ಅತ್ಮಹತ್ಯೆ ಮಾಡಿಕೊಂಡು ಕುಟುಂಬಸ್ಥರಿಗೂ ಹಾಗೂ ಅಭಿಮಾನಿಗಳು ದೊಡ್ಡ ಶಾಕ್ ನೀಡಿದ್ದಳು. ಕಳೆದ ಎರಡು ದಿನಗಳ ಜೂ. 25ರಂದು ಸಿಯಾ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ನಿರ್ಧಾರಕ್ಕೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ.

ದೆಹಲಿಯ ನಿವಾಸಿಯಾಗಿದ್ದ ಸಿಯಾ ತಮ್ಮ ಟಿಕ್ಟಾುಕ್, ಡ್ಯಾನ್ಸ್, ಫೋಟೋ ಶೂಟ್, ಡಬ್ಬಿಂಗ್ ಮೂಲಕ ಅಪಾರ ಫಾಲೋವರ್ಸ್ ಗಳನ್ನು ಹೊಂದಿದ್ದಳು. ಇಷ್ಟೊಂದು ಹೆಸರು ಮಾಡಿದ್ದ ಸಿಯಾ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಯಾ ಮೃತದೇಹ ಆಕೆಯ ಕೋಣೆಯಲ್ಲಿ ಪತ್ತೆಯಾಗಿತ್ತು. ಬುಧವಾರ ಇನ್ಸ್ಟಾರಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದ ಸಿಯಾಳ ಈ ನಿರ್ಧಾರಕ್ಕೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಸಿಯಾ, ಮ್ಯಾನೇಜರ್ ಅರ್ಜುನ್ ಸಿರಿನ್ ಹಾಗೂ ಕುಟುಂಬಸ್ಥರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಿಯಾಳಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪತ್ರಿಕೆಗಳಲ್ಲಿಯೂ ಸುದ್ದಿ ಪ್ರಕಟವಾಗಿದೆ. ಅಪರಿಚಿತರ ಫೋನ್ ಕಾಲ್ ಗಳಿಂದ ಬೇಸತ್ತು ಸಿಯಾ ನೇಣಿಗೆ ಶರಣಾಗಿರಬಹುದೆಂದು ಎಂಬ ಅನುಮಾನಗಳು ದಟ್ಟವಾಗಿವೆ. ಈ ಅನುಮಾನಗಳ ಕುರಿತು ಪೊಲೀಸರು ಇದುವರೆಗೂ ಯಾವುದೇ ಸ್ಪಷ್ಟನೆಯನ್ನ ಸಹ ನೀಡಿಲ್ಲ.

1 comment
  1. ಯಾಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕ್ಬರದು sir..

Leave a Reply

Your email address will not be published. Required fields are marked *

You May Also Like

ಬದುಕು ಮುಗಿಸಿದ ಬಂಗಾರದ ಅವ್ವ :ಡಾ. ಗೀತಾ ನಾಗಭೂಷಣ

ಸನ್ 2010ರಲ್ಲಿ ಗದಗ ನಲ್ಲಿ ಜರುಗಿದ ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ…

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು!

ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಲೂಟಿ – ಆಮ್ ಆದ್ಮಿ!

ಬೆಂಗಳೂರು : ಕೊರೊನಾ ಹೆಸರಿನಲ್ಲಿ ರೂ. 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣದಲ್ಲಿ ಬಿಜೆಪಿ ಸರ್ಕಾರ ಭಾಗಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!