ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ ಮಾಡಿ ಕೊಡುತ್ತಿದೆ. ಟಿಕ್ಟಾಲಕ್ ಮೂಲಕ ಚಿರಪರಿಚತಳಾಗಿದ್ದ ಸಿಯಾ ಚಿಕ್ಕ ವಯಸ್ಸಿನಲ್ಲಿಯೇ ಅತ್ಮಹತ್ಯೆ ಮಾಡಿಕೊಂಡು ಕುಟುಂಬಸ್ಥರಿಗೂ ಹಾಗೂ ಅಭಿಮಾನಿಗಳು ದೊಡ್ಡ ಶಾಕ್ ನೀಡಿದ್ದಳು. ಕಳೆದ ಎರಡು ದಿನಗಳ ಜೂ. 25ರಂದು ಸಿಯಾ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ನಿರ್ಧಾರಕ್ಕೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ.

ದೆಹಲಿಯ ನಿವಾಸಿಯಾಗಿದ್ದ ಸಿಯಾ ತಮ್ಮ ಟಿಕ್ಟಾುಕ್, ಡ್ಯಾನ್ಸ್, ಫೋಟೋ ಶೂಟ್, ಡಬ್ಬಿಂಗ್ ಮೂಲಕ ಅಪಾರ ಫಾಲೋವರ್ಸ್ ಗಳನ್ನು ಹೊಂದಿದ್ದಳು. ಇಷ್ಟೊಂದು ಹೆಸರು ಮಾಡಿದ್ದ ಸಿಯಾ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಯಾ ಮೃತದೇಹ ಆಕೆಯ ಕೋಣೆಯಲ್ಲಿ ಪತ್ತೆಯಾಗಿತ್ತು. ಬುಧವಾರ ಇನ್ಸ್ಟಾರಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದ ಸಿಯಾಳ ಈ ನಿರ್ಧಾರಕ್ಕೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಸಿಯಾ, ಮ್ಯಾನೇಜರ್ ಅರ್ಜುನ್ ಸಿರಿನ್ ಹಾಗೂ ಕುಟುಂಬಸ್ಥರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಿಯಾಳಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪತ್ರಿಕೆಗಳಲ್ಲಿಯೂ ಸುದ್ದಿ ಪ್ರಕಟವಾಗಿದೆ. ಅಪರಿಚಿತರ ಫೋನ್ ಕಾಲ್ ಗಳಿಂದ ಬೇಸತ್ತು ಸಿಯಾ ನೇಣಿಗೆ ಶರಣಾಗಿರಬಹುದೆಂದು ಎಂಬ ಅನುಮಾನಗಳು ದಟ್ಟವಾಗಿವೆ. ಈ ಅನುಮಾನಗಳ ಕುರಿತು ಪೊಲೀಸರು ಇದುವರೆಗೂ ಯಾವುದೇ ಸ್ಪಷ್ಟನೆಯನ್ನ ಸಹ ನೀಡಿಲ್ಲ.

1 comment
  1. ಯಾಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕ್ಬರದು sir..

Leave a Reply

Your email address will not be published. Required fields are marked *

You May Also Like

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.

ಕೊರೊನಾ ಕಾಟ: ರಾಜಸ್ಥಾನ ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…