ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಹಿಂದೆ ಘೋಷಿಸಿದಂತೆ ರಾಜ್ಯದಲ್ಲಿ ಪ್ರತಿ ಭಾನುವಾರ ಕಂಪ್ಲೀಟ್ ಬಂದ್ ಇರಲಿದೆ. ಜುಲೈ 5 ರಿಂದ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಬಸ್, ಟ್ಯಾಕ್ಸಿ, ಆಟೋ ಸೇರಿದಂತೆ ಯಾವುದೇ ವಾಹನಗಳನ್ನು ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ಮೇಲೆ ಕೇಸ್ ಹಾಕಲು ಸರ್ಕಾರವು ಪೊಲೀಸ್ ಇಲಾಖೆಗೆ ಸೂಚಿಸಿದೆ. ಅಲ್ಲದೇ, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸದ ಅವಧಿ ನೀಡಲಾಗಿದೆ. ಶನಿವಾರ ಹಾಗೂ ಭಾನುವಾರ ಸರ್ಕಾರಿ ಕೆಲಸಗಾರರಿಗೆ ರಜೆ ನೀಡಲಾಗುವುದು ಎಂದು ತಿಳಿದು ಬಂದಿದ್ದು ಈ ಕುರಿತು ಸರ್ಕಾರದ ಅಧಿಕೃತ ಆದೇಶ ಹೊರಬೀಳಬೇಕಿದೆ.