ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಹಿಂದೆ ಘೋಷಿಸಿದಂತೆ ರಾಜ್ಯದಲ್ಲಿ ಪ್ರತಿ ಭಾನುವಾರ ಕಂಪ್ಲೀಟ್ ಬಂದ್ ಇರಲಿದೆ. ಜುಲೈ 5 ರಿಂದ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಬಸ್, ಟ್ಯಾಕ್ಸಿ, ಆಟೋ ಸೇರಿದಂತೆ ಯಾವುದೇ ವಾಹನಗಳನ್ನು ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ಮೇಲೆ ಕೇಸ್ ಹಾಕಲು ಸರ್ಕಾರವು ಪೊಲೀಸ್ ಇಲಾಖೆಗೆ ಸೂಚಿಸಿದೆ. ಅಲ್ಲದೇ, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸದ ಅವಧಿ ನೀಡಲಾಗಿದೆ. ಶನಿವಾರ ಹಾಗೂ ಭಾನುವಾರ ಸರ್ಕಾರಿ ಕೆಲಸಗಾರರಿಗೆ ರಜೆ ನೀಡಲಾಗುವುದು ಎಂದು ತಿಳಿದು ಬಂದಿದ್ದು ಈ ಕುರಿತು ಸರ್ಕಾರದ ಅಧಿಕೃತ ಆದೇಶ ಹೊರಬೀಳಬೇಕಿದೆ.

Leave a Reply

Your email address will not be published. Required fields are marked *

You May Also Like

ದೇಶದ ನಕ್ಷೆ ತಪ್ಪಾಗಿ ತೋರಿಸಿದ್ದಕ್ಕೆ ಟ್ವೀಟರ್ ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸರ್ಕಾರ!

ನವದೆಹಲಿ : ಟ್ವೀಟರ್ ನಲ್ಲಿ ತಪ್ಪಾಗಿ ಭಾರತೀಯ ನಕ್ಷೆ ತೋರಿಸಿದ್ದಕ್ಕೆ ಕೇಂದ್ರ ಸರ್ಕಾರವು ಟ್ವೀಟರ್ ಸಿಇಓ ಜಾಕ್ ಡೋರ್ಸಿ ಅವರಿಗೆ ಪತ್ರ ಬರೆದಿದೆ.

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.

ಮಹಿಳಾ ಮಣಿಗಳ ಅಧಿಪತ್ಯಪ್ರಾರಂಭ: ಬಿಜೆಪಿಗೆ ರಾಮನಿಂದ ಪಟ್ಟಾಭಿಷೇಕ,ಕಾನೂನು ಹೋರಾಟ -ಎಚ್ ಕೆ ಪಾಟೀಲ

ಉತ್ತರಪ್ರಭ ಸುದ್ದಿಗದಗ: ಕಾಂಗ್ರೆಸ್‌ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ದಶಕಗಳ ಬಳಿಕ ಬಿಜೆಪಿ ಪಾಲು, ಬಿಜೆಪಿಯಲ್ಲಿ ಸಂಭ್ರಮ…

ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ಅಖಂಡ ಕರ್ನಾಟಕ ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಗಜೇಂದ್ರಗಡ ಹಾಗೂ ರೋಣ ತಾಲೂಕಾ ಗೊಲ್ಲ ಸಮಾಜ ಬಾಂಧವರು ಪಟ್ಟಣದ ತಹಶೀಲ್ದಾರ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.