ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಹಿಂದೆ ಘೋಷಿಸಿದಂತೆ ರಾಜ್ಯದಲ್ಲಿ ಪ್ರತಿ ಭಾನುವಾರ ಕಂಪ್ಲೀಟ್ ಬಂದ್ ಇರಲಿದೆ. ಜುಲೈ 5 ರಿಂದ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಬಸ್, ಟ್ಯಾಕ್ಸಿ, ಆಟೋ ಸೇರಿದಂತೆ ಯಾವುದೇ ವಾಹನಗಳನ್ನು ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ಮೇಲೆ ಕೇಸ್ ಹಾಕಲು ಸರ್ಕಾರವು ಪೊಲೀಸ್ ಇಲಾಖೆಗೆ ಸೂಚಿಸಿದೆ. ಅಲ್ಲದೇ, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸದ ಅವಧಿ ನೀಡಲಾಗಿದೆ. ಶನಿವಾರ ಹಾಗೂ ಭಾನುವಾರ ಸರ್ಕಾರಿ ಕೆಲಸಗಾರರಿಗೆ ರಜೆ ನೀಡಲಾಗುವುದು ಎಂದು ತಿಳಿದು ಬಂದಿದ್ದು ಈ ಕುರಿತು ಸರ್ಕಾರದ ಅಧಿಕೃತ ಆದೇಶ ಹೊರಬೀಳಬೇಕಿದೆ.

Leave a Reply

Your email address will not be published. Required fields are marked *

You May Also Like

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಕೊರೊನಾ ಆಸ್ಪತ್ರೆಯ ಬಿಲ್ ನೋಡಿ ಕುಸಿದು ಬಿದ್ದ ರೋಗಿ!

ವಾಷಿಂಗ್ಟನ್ : ಅಮೆರಿಕದಲ್ಲಿನ 70 ವರ್ಷದ ವೃದ್ಧರೊಬ್ಬರು ಕೊರೊನಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.…