ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ.

ಸರ್ಕಾರಿ ನೌಕರಸ್ಥರು ಇನ್ನು ಮುಂದೆ ಐಟಿ – ಬಿಟಿ ಉದ್ಯೋಗಿಗಳ ರೀತಿಯಲ್ಲಿಯೇ ಕೆಲಸ ನಿರ್ವಹಿಸಬೇಕು. ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಮಾಡಬೇಕು. ಸರ್ಕಾರಿ ನೌಕರರಿಗೆ ಶನಿವಾರ, ಭಾನುವಾರ ರಜೆ ಎರಡು ದಿನ ರಜೆ ಇರಲಿದೆ. ಜುಲೈ 10ರಿಂದ ತಿಂಗಳ ನಾಲ್ಕೂ ಶನಿವಾರಗಳು ರಜೆ ಸಿಗಲಿದೆ. ಎಲ್ಲ ಶನಿವಾರ ರಜೆಯು ಸದ್ಯಕ್ಕೆ ಜುಲೈ ತಿಂಗಳಲ್ಲಿ ಅನ್ವಯವಾಲಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ನೌಕರರು ಆಯಾ ಏರಿಯಾಗಳಿಗೆ ಅನುಗುಣವಾಗಿ ಒಂದು ದಿನ ಬಿಟ್ಟು ಒಂದು ದಿನ ಕೆಲಸ ಮಾಡಬೇಕು. ಈ ನಿರ್ಧಾರವನ್ನು ಆಯಾ ಸ್ಥಳೀಯ ಕಚೇರಿಗಳ ಮುಖ್ಯಸ್ಥರೇ ತೆಗೆದುಕೊಳ್ಳಬಹುದು. ವಾರದ 5 ದಿನಗಳು ಕಚೇರಿ ಇರಬೇಕು. ಆದರೆ ನೌಕರರಿಗೆ ಒಂದು ದಿನ ಬಿಟ್ಟು ಒಂದು ದಿನ ಕೆಲಸ ನೀಡಬೇಕು ಎಂದು ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ವಾರಕ್ಕೆ 2 ದಿನ ರಜೆ ಎಲ್ಲ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲ್ಲ. ಸೋಂಕು ಹೆಚ್ಚಾದ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಮುಖ್ಯಸ್ಥರು ಕ್ರಮ ಕೈಗೊಳ್ಳಬಹುದು. ದಿನಕ್ಕೆ ಶೇ. 50ರಷ್ಟು ನೌಕರರು ಮಾತ್ರ ಕಾರ್ಯ ನಿರ್ವಹಿಸಬೇಕು. ಇವತ್ತು ಬಂದವರು, ನಾಳೆ ಬರುವಂತಿಲ್ಲ ಎಂಬ ನಿಯಮ ರೂಪಿಸುವ ಯೋಚನೆ ಹೊಂದಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.