ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ.

ಸರ್ಕಾರಿ ನೌಕರಸ್ಥರು ಇನ್ನು ಮುಂದೆ ಐಟಿ – ಬಿಟಿ ಉದ್ಯೋಗಿಗಳ ರೀತಿಯಲ್ಲಿಯೇ ಕೆಲಸ ನಿರ್ವಹಿಸಬೇಕು. ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಮಾಡಬೇಕು. ಸರ್ಕಾರಿ ನೌಕರರಿಗೆ ಶನಿವಾರ, ಭಾನುವಾರ ರಜೆ ಎರಡು ದಿನ ರಜೆ ಇರಲಿದೆ. ಜುಲೈ 10ರಿಂದ ತಿಂಗಳ ನಾಲ್ಕೂ ಶನಿವಾರಗಳು ರಜೆ ಸಿಗಲಿದೆ. ಎಲ್ಲ ಶನಿವಾರ ರಜೆಯು ಸದ್ಯಕ್ಕೆ ಜುಲೈ ತಿಂಗಳಲ್ಲಿ ಅನ್ವಯವಾಲಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ನೌಕರರು ಆಯಾ ಏರಿಯಾಗಳಿಗೆ ಅನುಗುಣವಾಗಿ ಒಂದು ದಿನ ಬಿಟ್ಟು ಒಂದು ದಿನ ಕೆಲಸ ಮಾಡಬೇಕು. ಈ ನಿರ್ಧಾರವನ್ನು ಆಯಾ ಸ್ಥಳೀಯ ಕಚೇರಿಗಳ ಮುಖ್ಯಸ್ಥರೇ ತೆಗೆದುಕೊಳ್ಳಬಹುದು. ವಾರದ 5 ದಿನಗಳು ಕಚೇರಿ ಇರಬೇಕು. ಆದರೆ ನೌಕರರಿಗೆ ಒಂದು ದಿನ ಬಿಟ್ಟು ಒಂದು ದಿನ ಕೆಲಸ ನೀಡಬೇಕು ಎಂದು ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ವಾರಕ್ಕೆ 2 ದಿನ ರಜೆ ಎಲ್ಲ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲ್ಲ. ಸೋಂಕು ಹೆಚ್ಚಾದ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಮುಖ್ಯಸ್ಥರು ಕ್ರಮ ಕೈಗೊಳ್ಳಬಹುದು. ದಿನಕ್ಕೆ ಶೇ. 50ರಷ್ಟು ನೌಕರರು ಮಾತ್ರ ಕಾರ್ಯ ನಿರ್ವಹಿಸಬೇಕು. ಇವತ್ತು ಬಂದವರು, ನಾಳೆ ಬರುವಂತಿಲ್ಲ ಎಂಬ ನಿಯಮ ರೂಪಿಸುವ ಯೋಚನೆ ಹೊಂದಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊಡುವ ಡ್ಯಾನ್ಸ್ ಮಾಡಿದ ಹರ್ಷಿಕಾ-ಭುವನ್

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದರೆ ಮಾಡಿದ ಸಹಾಯಕ್ಕೆ ಹೆಚ್ಚು ಮಹತ್ವ ಬರುತ್ತದೆ. ಜನರ ಸಂಕಷ್ಟ ಅರಿತ ಸ್ಯಾಂಡಲ್ ವುಡ್ ಸ್ಟಾರ್ ಗಳು ಅವರ ಕೈಲಾದಷ್ಟು ಸೇವೆಗೆ ಮುಂದಾಗಿದ್ದಾರೆ.

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಹುಡುಗಿಯ ಭಯಾನಕ ಕತೆ!

ಕಳೆದ ನಾಲ್ಕು ವರ್ಷಗಳ ಹಿಂದೆ ನಾಗಾಲ್ಯಾಂಡ್‌ನಿಂದ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದವಳು ಬೆಂಗಳೂರಿಗೆ ಬಂದವಳು ಆಪ್ತರೊಂದಿಗೆ ಜೈಲು ಪಾಲಾಗಿದ್ದಾರೆ.

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…