ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ.

ಸರ್ಕಾರಿ ನೌಕರಸ್ಥರು ಇನ್ನು ಮುಂದೆ ಐಟಿ – ಬಿಟಿ ಉದ್ಯೋಗಿಗಳ ರೀತಿಯಲ್ಲಿಯೇ ಕೆಲಸ ನಿರ್ವಹಿಸಬೇಕು. ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಮಾಡಬೇಕು. ಸರ್ಕಾರಿ ನೌಕರರಿಗೆ ಶನಿವಾರ, ಭಾನುವಾರ ರಜೆ ಎರಡು ದಿನ ರಜೆ ಇರಲಿದೆ. ಜುಲೈ 10ರಿಂದ ತಿಂಗಳ ನಾಲ್ಕೂ ಶನಿವಾರಗಳು ರಜೆ ಸಿಗಲಿದೆ. ಎಲ್ಲ ಶನಿವಾರ ರಜೆಯು ಸದ್ಯಕ್ಕೆ ಜುಲೈ ತಿಂಗಳಲ್ಲಿ ಅನ್ವಯವಾಲಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ನೌಕರರು ಆಯಾ ಏರಿಯಾಗಳಿಗೆ ಅನುಗುಣವಾಗಿ ಒಂದು ದಿನ ಬಿಟ್ಟು ಒಂದು ದಿನ ಕೆಲಸ ಮಾಡಬೇಕು. ಈ ನಿರ್ಧಾರವನ್ನು ಆಯಾ ಸ್ಥಳೀಯ ಕಚೇರಿಗಳ ಮುಖ್ಯಸ್ಥರೇ ತೆಗೆದುಕೊಳ್ಳಬಹುದು. ವಾರದ 5 ದಿನಗಳು ಕಚೇರಿ ಇರಬೇಕು. ಆದರೆ ನೌಕರರಿಗೆ ಒಂದು ದಿನ ಬಿಟ್ಟು ಒಂದು ದಿನ ಕೆಲಸ ನೀಡಬೇಕು ಎಂದು ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ವಾರಕ್ಕೆ 2 ದಿನ ರಜೆ ಎಲ್ಲ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲ್ಲ. ಸೋಂಕು ಹೆಚ್ಚಾದ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಮುಖ್ಯಸ್ಥರು ಕ್ರಮ ಕೈಗೊಳ್ಳಬಹುದು. ದಿನಕ್ಕೆ ಶೇ. 50ರಷ್ಟು ನೌಕರರು ಮಾತ್ರ ಕಾರ್ಯ ನಿರ್ವಹಿಸಬೇಕು. ಇವತ್ತು ಬಂದವರು, ನಾಳೆ ಬರುವಂತಿಲ್ಲ ಎಂಬ ನಿಯಮ ರೂಪಿಸುವ ಯೋಚನೆ ಹೊಂದಿದೆ.

Leave a Reply

Your email address will not be published. Required fields are marked *

You May Also Like

ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!

ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ವಾರಾಂತ್ಯ ಕಪ್ಯೂ೯ಗೆ ಉತ್ತಮ ಸ್ಪಂದನೆ : ನಿಡಗುಂದಿ ಸ್ತಬ್ಧ- ಆಲಮಟ್ಟಿ ಗಾಡ್೯ನಗಳು ಬೀಕೋ

ನಿಡಗುಂದಿ : ಸದಾ ಜನಜಂಗುಳಿಯಿಂದ ಗಿಜಗುಡುತ್ತಿದ್ದ ಪ್ರಮುಖ ರಸ್ತೆಗಳೆಲ್ಲ ಭಾಗಶಃ ಖಾಲಿಖಾಲಿ. ಅಂಗಡಿ,ಮುಂಗಟ್ಟುಗಳೆಲ್ಲ ಬಾಗಿಲು ತೆರೆಯದ…

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.