ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ ಅವರ ವಿಶೇಷ ಎಂದು ಭಾರತೀಯ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ ಹೇಳಿದ್ದಾರೆ.

ಸಂದರ್ಶನವೊಂದಲ್ಲಿ ಮಾತನಾಡಿದ ವಿಕ್ರಮ್ ರಾಥೋಡ್, ಕೊಹ್ಲಿಯ ಬದ್ಧತೆ ಅವರ ಅತ್ಯುತ್ತಮ ಕೆಲಸ ಎಂದು ನಂಬುತ್ತೇನೆ. ಅವರು ವಿಶ್ವದ ಅತ್ಯುತ್ತಮ ಆಟಗಾರರಾಗಲು ಬಯಸುತ್ತಾರೆ. ಅದಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಅವರು ಪ್ರತಿಯೊಂದು ಸನ್ನಿವೇಶಕ್ಕೆ ಹೊಂದಿಕೊಳ್ಳುತ್ತಾರೆ. ವಿರಾಟ್ ಒಂದೇ ರೀತಿ ಆಡುವ ಆಟಗಾರ ಮಾತ್ರವಲ್ಲ. ಅವರು ಎಲ್ಲ ಸ್ವರೂಪಗಳಲ್ಲಿ ವಿಭಿನ್ನವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇದು ಅವರ ಶಕ್ತಿ ಎಂದು ಹೇಳಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ 86 ಟೆಸ್ಟ್ ಪಂದ್ಯಗಳನ್ನು ಆಡಿ 53.62 ಸರಾಸರಿಯಲ್ಲಿ 27 ಶತಕ ಸೇರಿ 7,240 ರನ್ ಗಳಿಸಿದ್ದಾರೆ. 248 ಏಕದಿನ ಪಂದ್ಯಗಳಲ್ಲಿ 11,867 ರನ್ ಮತ್ತು 81 ಟಿ20 ಪಂದ್ಯಗಳಲ್ಲಿ 2,794 ರನ್ ಗಳಿಸಿದ್ದಾರೆ. ಐಪಿಎಲ್ನಲ 177 ಪಂದ್ಯಗಳಲ್ಲಿ ಕೊಹ್ಲಿ ಇದುವರೆಗೆ 5,412 ರನ್ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಪರಿಸರ ದಿನವೇ 23 ಮರಗಳ ಹಾಫ್ ಮರ್ಡರ್ : ವಿಂಡ್ ಕಂಪನಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಉತ್ತರಪ್ರಭ ನಿಂಗಪ್ಪ ಬಿ.ಮಡಿವಾಳರ ಗಾಳಿಯಂತ್ರ ಸಾಗಿಸಲು ಗಾಳಿ ಕೊಡುವ ಮರದ ಟೊಂಗೆಗಳು ಬಲಿ ಐತಿಹಾಸಿಕ ಗಿಡಗಳನ್ನು…

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯವೇನು.?

ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.