ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಹೊಸ ಆದೇಶದಂತೆ ದಿನಾಂಕ 05/07/2020 ಭಾನುವಾರದಿಂದ 02/08/2020 ರ ವರೆಗಿನ 4 ಭಾನುವಾರಗಳು ದಿನಪೂರ್ತಿ ಲಾಕ್‌ಡೌನ್‌ ಇರಲಿದೆ. ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜುಲೈ 10 ರಿಂದ ಆಗಸ್ಟ್‌ 08 ರವರೆಗೆ ಎಲ್ಲಾ ಶನಿವಾರಗಳು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡುಗಳು ಹಾಗೂ ಕಾರ್ಪೊರೇಷನ್‌ಗಳು ಮುಚ್ಚಲು ಆದೇಶ ನೀಡಲಾಗಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ನೀಡುವ ಸಂಸ್ಥೆಗಳು ಇದರಿಂದ ಹೊರತಾಗಿರುತ್ತದೆ.

ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಡದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…

ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಜವಾಬ್ದಾರಿ ಮುಗಿಯಲ್ಲ

ಸರ್ಕಾರ ಅನೇಕ ಯೋಜನೆಗಳನ್ನು ಅದರಲ್ಲೂ ಮುಖ್ಯವಾಗಿ ನೀರಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಕೇವಲ ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಇಲಾಖೆಯ ಜವಾಬ್ದಾರಿ ಮುಗಿಯುವುದಿಲ್ಲ. ನೀರು ಸರಬರಾಜು ಆಗುತ್ತದೆಯೋ ಇಲ್ಲೋವೋ ಎನ್ನುವುದನ್ನು ಅಧಿಕಾರಿಗಳು ಮನದಟ್ಟ ಮಾಡಿಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಗುರಿಕಾರ ಅಧಿಕಾರಿಗಳಿಗೆ ತಾಕೀತು ಮಾಡಿದರು

ಫೆ. 24ರಿಂದ ಮುಳಗುಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಇದೇ ಫೆ 24 ರಿಂದ 26 ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ, ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ

ಗದಗ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ…