ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಹೊಸ ಆದೇಶದಂತೆ ದಿನಾಂಕ 05/07/2020 ಭಾನುವಾರದಿಂದ 02/08/2020 ರ ವರೆಗಿನ 4 ಭಾನುವಾರಗಳು ದಿನಪೂರ್ತಿ ಲಾಕ್‌ಡೌನ್‌ ಇರಲಿದೆ. ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜುಲೈ 10 ರಿಂದ ಆಗಸ್ಟ್‌ 08 ರವರೆಗೆ ಎಲ್ಲಾ ಶನಿವಾರಗಳು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡುಗಳು ಹಾಗೂ ಕಾರ್ಪೊರೇಷನ್‌ಗಳು ಮುಚ್ಚಲು ಆದೇಶ ನೀಡಲಾಗಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ನೀಡುವ ಸಂಸ್ಥೆಗಳು ಇದರಿಂದ ಹೊರತಾಗಿರುತ್ತದೆ.

ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಡದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.