ಬೆಂಗಳೂರು: ಈಗ ಮಳೆಗಾಲ ಆರಂಭವಾಗಿದೆ. ಅಲ್ಲದೇ, ಕೊರೊನಾ ಕಾಟ ಕೂಡ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಎಲ್ಲರಿಗೂ ದೊಡ್ಡ ಚಿಂತೆಯಾಗಿ ಬಿಟ್ಟಿದೆ. ಮಳೆಗಾಲದಲ್ಲಿಯೇ ಸಾಮಾನ್ಯವಾಗಿ ಎಲ್ಲರ ಆರೋಗ್ಯ ಹದಗೆಡುತ್ತದೆ. ಗಾಳಿಯಲ್ಲಿನ ತೇವಾಂಶವು ಅನೇಕ ರೀತಿಯ ಹಾನಿಕಾರಕ ಸೂಕ್ಷ್ಮ ಜೀವಿಗಳ ಬೆಳವಣಿಗೆಗಳನ್ನು ಪ್ರಚೋದಿಸುತ್ತದೆ. ಈ ಕಾರಣಕ್ಕಾಗಿ ಅನಾರೋಗ್ಯ ಎಲ್ಲರನ್ನೂ ಬಾಧಿಸುತ್ತದೆ.

ಹೀಗಾಗಿ ಎಲ್ಲರೂ ಸಾಧ್ಯವಾದಷ್ಟು ಆರೋಗ್ಯ ಕಾಪಾಡಿಕೊಳ್ಳಬೇಕು. ಅಲ್ಲದೇ, ಈ ಸಂದರ್ಭದಲ್ಲಿಯೇ ಜನರ ಬಾಯಿ ಚಪಲ ಕೂಡ ಹೆಚ್ಚಾಗಿರುತ್ತದೆ. ಸಂಜೆಯಾಗುತ್ತಿದ್ದಂತೆಯೇ ಚಾಟ್ ಹಾಗೂ ಪಕೋಡಾ ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ. ಈ ಸಂದರ್ಭದಲ್ಲಿ ಆಹಾರ ಸೇವನೆ ಮಾಡವುದು ಉತ್ತಮವಲ್ಲ, ಸೂಪ್ ಸೇವನೆ ಮಾಡುವುದು ಉತ್ತಮವಾಗಿರುತ್ತದೆ.
ಸೂಪ್ ಗಳು ಪೌಷ್ಠಿಕಾಂಶಗಳಿಂದ ತುಂಬಿದ್ದು, ಬಾಯಿಗೂ ರುಚಿ ನೀಡುವುದಲ್ಲದೆ, ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ. ಶುಂಠಿ, ಬೆಳ್ಳುಳ್ಳಿ ಹಾಗೂ ಕಾಳು ಮೆಣಸಿನೊಂದಿಗೆ ಸಿದ್ಧಪಡಿಸಿದ ಸೂಪ್ ಕುಡಿದರೆ ಒಳ್ಳೆಯದು.

ಗ್ರೀನ್ ಟೀ ಕುಡಿಯುವುದರಿಂದ ಸಾಕಷ್ಟು ಪ್ರಯೋಜನೆಗಳಿವೆ. ಜನರು ಟೀ, ಕಾಫಿ ಕುಡಿಯಲು ಇಚ್ಛಿಸುತ್ತಾರೆ. ಈ ಸಂದರ್ಭದಲ್ಲಿ ಗ್ರೀನ್ ಟೀ ಕುಡಿಯುವುದು ಉತ್ತಮ. ಜೇನುತುಪ್ಪ ಅನೇಕ ಪ್ರಯೋಜನಗಳನ್ನು ಹೊಂದಿದೆ. ಪ್ರತೀನಿತ್ಯ ಜೇನುತುಪ್ಪ ಸೇವನೆ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮನುಷ್ಯನ ದೇಹದಲ್ಲಿರುವ ಹಾನಿಕಾರಕ ಸೂಕ್ಷ್ಮ ಜೀವಿಗಳ ಚಟುವಟಿಕೆಯನ್ನು ಪ್ರತಿರೋಧಿಸುತ್ತದೆ.

ಸಾಂಪ್ರದಾಯಿಕ ಔಷಧ ಪದ್ಧತಿಯಲ್ಲಿ ಉಸಿರಾಟ ಸಮಸ್ಯೆಯ ಚಿಕಿತ್ಸೆಗೆ ಜೇನುತುಪ್ಪ ಬಳಕೆ ಮಾಡುವುದನ್ನು ಇನ್ನು ನೆನೆಯಬಹುದಾಗಿದೆ. ಕಫ, ಅಸ್ತಮಾ, ಕೆಮ್ಮು ಸಮಸ್ಯೆಗಳನ್ನು ಎದುರಿಸಲು ಪ್ರತೀನಿತ್ಯ ಜೇನುತುಪ್ಪ ಸೇವನೆ ಮಾಡುವಂತೆ ಸೂಚಿಸಲಾಗುತ್ತದೆ.

ಬೇವಿನ ಸೊಪ್ಪು ಎಷ್ಟು ಕಹಿಯಾಗಿರುತ್ತದೆಯೋ ಅಷ್ಟೇ ಲಾಭವನ್ನು ನೀಡುತ್ತದೆ. ಪ್ರತೀನಿತ್ಯ ಬೇವಿನ ಸೊಪ್ಪನ್ನು ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿ ಎದುರಾಗುವ ಸಮಸ್ಯೆಗಳು ದೂರಾಗುತ್ತವೆ. ದೇಹದ ರಕ್ತವನ್ನು ಶುದ್ಧೀಕರಿಸುವ ಶಕ್ತಿ ಈ ಬೇವು ಹೊಂದಿದೆ. ಅಲ್ಲದೆ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.

ಅಲೋವೆರಾ (ಲೋಳೆಸರ) ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ಪದಾರ್ಥವಾಗಿದೆ. 20 ಕ್ಕೂ ಹೆಚ್ಚು ಅಮೈನೋ ಆಮ್ಲಗಳು, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಸೋಡಿಯಂ ಜೊತೆಗೆ ಕಿಣ್ವಗಳು, ಜೀವಸತ್ವಗಳು, ಸಾರಜನಕ ಮತ್ತು ಇತರೆ ಪ್ರಮುಖ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ಕೂದಲು ಹಾಗೂ ಚರ್ಮದ ಸಮಸ್ಯೆಯನ್ನು ದೂರಾಗಿಸುವುದಲ್ಲದೆ, ಕಾಂತಿಯುತವಾಗಿರುವಂತೆ ನೋಡಿಕೊಳ್ಳುತ್ತದೆ. ಮಲಬದ್ಧತೆಯಂತಹ ಸಮಸ್ಯೆಯನ್ನು ದೂರಾಗಿಸುವುದಲ್ಲದೆ, ಜೀರ್ಣಶಕ್ತಿಯನ್ನು ವೃದ್ಧಿಸುತ್ತದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಹೊಸ ರೂಪದಲ್ಲಿ ಯೆಝ್ಡಿ: ಇಲೆಕ್ಟ್ರಿಕಲ್ ಮೋಟರ್ ವೆಹಿಕಲ್

ಜಾವಾ ಯೆಝ್ಡಿ ಮೋಟಾರ್ ಸೈಕಲ್ ಎಂದಿನಂತೆ ಇರಲಿದೆ. ಜೊತೆಗೆ ಯೆಝ್ಡಿ ಇಲೆಕ್ಟ್ರಿಕಲ್ ಮೋಟಾರ್ ವೆಹಿಕಲ್ ಕೂಡ ಮಾರುಕಟ್ಟೆಗೆ ಬರಲಿದೆ.

ವರ್ಕ್ ಫ್ರಮ್ ಹೋಮ್ ಮಾಡಿದವರ ಪರಿಸ್ಥಿತಿಗೆ ಹೇಗಾಗಿದೆ ಗೊತ್ತಾ?

ನವದೆಹಲಿ : ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಹೀಗಾಗಿ ಕಂಪನಿ…