ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇಂದು ಸವಣೂರು – 2, ರಾಣೇಬೆನ್ನೂರು – 1, ಹಾನಗಲ್ – 3, ಹಿರೇಕೆರೂರು – 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ನಾಗೇಂದ್ರನಮಟ್ಟಿಯ ಪ್ರದೇಶದಲ್ಲಿ ಓರ್ವ ಮಹಿಳೆಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅಕ್ಕನಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆ ಇಂದು ನಡೆಯಬೇಕಿದ್ದ ತಂಗಿಯ ಮದುವೆಯನ್ನೇ ರದ್ದು ಮಾಡಲಾಗಿದೆ.

ಜಿಲ್ಲಾಡಳಿತ ಸದ್ಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮದುಮಗಳು ಸೇರಿ 20 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಮಹಿಳೆ ವಾಸವಿದ್ದ ಪ್ರದೇಶವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೀಲ್ ಡೌನ್ ಮಾಡಿರುವುದು ಸ್ಥಳೀಯ ಜನರ ಚಿಂತೆಗೆ ಕಾರಣವಾಗಿದೆ.

ಅಲ್ಲದೇ, ಜಿಲ್ಲೆಯ ಹಾನಗಲ್ ತಾಲೂಕಿನ ಮೂವರು ಆಶಾ ಕಾರ್ಯಕರ್ತೆಯರಲ್ಲಿ ಕೊರೊನಾ ವೈರಸ್ ಕಂಡು ಬಂದ ಹಿನ್ನೆಲೆಯಲ್ಲಿ ಕಲ್ಲಕ್ಕಲ, ಕಮಾಟಗೇರಿ, ಇಂದಿರಾನಗರಗಳನ್ನು ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಯತ್ನ ಚಿಕಿತ್ಸೆ ಫಲಿಸದೆ ಸಾವು

ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.