ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇಂದು ಸವಣೂರು – 2, ರಾಣೇಬೆನ್ನೂರು – 1, ಹಾನಗಲ್ – 3, ಹಿರೇಕೆರೂರು – 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ನಾಗೇಂದ್ರನಮಟ್ಟಿಯ ಪ್ರದೇಶದಲ್ಲಿ ಓರ್ವ ಮಹಿಳೆಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅಕ್ಕನಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆ ಇಂದು ನಡೆಯಬೇಕಿದ್ದ ತಂಗಿಯ ಮದುವೆಯನ್ನೇ ರದ್ದು ಮಾಡಲಾಗಿದೆ.

ಜಿಲ್ಲಾಡಳಿತ ಸದ್ಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮದುಮಗಳು ಸೇರಿ 20 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಮಹಿಳೆ ವಾಸವಿದ್ದ ಪ್ರದೇಶವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೀಲ್ ಡೌನ್ ಮಾಡಿರುವುದು ಸ್ಥಳೀಯ ಜನರ ಚಿಂತೆಗೆ ಕಾರಣವಾಗಿದೆ.

ಅಲ್ಲದೇ, ಜಿಲ್ಲೆಯ ಹಾನಗಲ್ ತಾಲೂಕಿನ ಮೂವರು ಆಶಾ ಕಾರ್ಯಕರ್ತೆಯರಲ್ಲಿ ಕೊರೊನಾ ವೈರಸ್ ಕಂಡು ಬಂದ ಹಿನ್ನೆಲೆಯಲ್ಲಿ ಕಲ್ಲಕ್ಕಲ, ಕಮಾಟಗೇರಿ, ಇಂದಿರಾನಗರಗಳನ್ನು ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ದಯಾಮರಣ ಕೋರಿ ಡಿಸಿಗೆ ಲಕ್ಷ್ಮೇಶ್ವರದ ಮಾಜಿ ಸೈನಿಕ ಮನವಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದ ಮಾಜಿ ಸೈನಿಕ ಈರಣ್ಣ ಅಣ್ಣಿಗೇರಿ ತಮಗೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಧಾರವಾಡ ವಿಧಾನ ಪರಿಷತ್ ಚುಣಾವಣೆ ; ಸಲೀಂ ಅಹ್ಮದ ಭರ್ಜರಿ ಜಯ

ಉತ್ತರಪ್ರಭ ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ…

ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.