ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇಂದು ಸವಣೂರು – 2, ರಾಣೇಬೆನ್ನೂರು – 1, ಹಾನಗಲ್ – 3, ಹಿರೇಕೆರೂರು – 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ನಾಗೇಂದ್ರನಮಟ್ಟಿಯ ಪ್ರದೇಶದಲ್ಲಿ ಓರ್ವ ಮಹಿಳೆಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅಕ್ಕನಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆ ಇಂದು ನಡೆಯಬೇಕಿದ್ದ ತಂಗಿಯ ಮದುವೆಯನ್ನೇ ರದ್ದು ಮಾಡಲಾಗಿದೆ.

ಜಿಲ್ಲಾಡಳಿತ ಸದ್ಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮದುಮಗಳು ಸೇರಿ 20 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಮಹಿಳೆ ವಾಸವಿದ್ದ ಪ್ರದೇಶವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೀಲ್ ಡೌನ್ ಮಾಡಿರುವುದು ಸ್ಥಳೀಯ ಜನರ ಚಿಂತೆಗೆ ಕಾರಣವಾಗಿದೆ.

ಅಲ್ಲದೇ, ಜಿಲ್ಲೆಯ ಹಾನಗಲ್ ತಾಲೂಕಿನ ಮೂವರು ಆಶಾ ಕಾರ್ಯಕರ್ತೆಯರಲ್ಲಿ ಕೊರೊನಾ ವೈರಸ್ ಕಂಡು ಬಂದ ಹಿನ್ನೆಲೆಯಲ್ಲಿ ಕಲ್ಲಕ್ಕಲ, ಕಮಾಟಗೇರಿ, ಇಂದಿರಾನಗರಗಳನ್ನು ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಮಹಾಯೋಗಿ ವೇಮನ ಜಯಂತಿ ಆಚರಣೆ

ಮುಳಗುಂದ : ಪಟ್ಟಣದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಂಘದ ವತಿಯಿಂದ ಬುಧವಾರ ಮಹಾಯೋಗಿ ವೇಮನರ…

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಲಿಂಗಾಯತರನ್ನು ಮುಗಿಸಲು ಪ್ರಹ್ಲಾದ್ ಜೋಶಿ ನಮ್ಮ ವಿರುದ್ಧ ನಿಂತಿದ್ದಾರೆ – ವಿಜಯ್ ಕುಲಕರ್ಣಿ ಆರೋಪ!

ಹುಬ್ಬಳ್ಳಿ : ಯೋಗೀಶಗೌಡ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೊಳಪಟ್ಟಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .