ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ.

ಜಿಲ್ಲೆಯ ಗುಳೇದಗುಡ್ಡ ತಾಲೂಕಿನ 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಸಾವನ್ನಪ್ಪಿದ್ದು, ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.

ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಹೀಗಾಗಿ ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಬಾಗಲಕೋಟೆ ಡಿಹೆಚ್‍ಓ ಅನಂತ ದೇಸಾಯಿ ಮಾಹಿತಿ ನೀಡಿದ್ದಾರೆ.

ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಗೆ ಐವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13,190ಕ್ಕೇರಿಕೆಯಾಗಿದ್ದು, ಭಾನುವಾರ ಒಂದೇ ದಿನ 16 ಮಂದಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ…

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…