ಮುಂಡರಗಿ: ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಇಂದು ಸೋಮವಾರ ಆಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿ ಕೆಲಸಕ್ಕೆ ಬಂದ ಜನ ತಹಶೀಲ್ದಾರ್ ಕಾರ್ಯಾಲಯದ ಗೇಟ್ ಬೀಗ ನೋಡಿ ನಿರಾಶೆಗೊಳಗಾದರು. ಗೇಟ್ ಬಳಿ ಒಬ್ಬ ಸಿಬ್ಬಂಧಿಯನ್ನು ಕೂರಿಸಿ ತುರ್ತು ಕಾರ್ಯದವರನ್ನು ಮಾತ್ರ ಬಿಡಲಾಗುತ್ತಿದೆ. ಬೆಳಿಗ್ಗೆಯಿಂದ ಮದ್ಯಾಹ್ನ 3:30 ಗಂಟೆಯ ಸುಮಾರಿಗೆ ಕೇವಲ 5 ಜನರನ್ನು ಮಾತ್ರ ಕಚೇರಿ ಕೆಲಸಕ್ಕೆ ಒಳಬಿಡಲಾಗಿತ್ತು. ಈ ಬಗ್ಗೆ ಸ್ವತಃ ಕಚೇರಿ ಸಿಬ್ಬಂಧಿಯೇ ಉತ್ತರಪ್ರಭಕ್ಕೆ ಮಾಹಿತಿ ನೀಡಿದರು.

ಸಿಬ್ಬಂಧಿಗಳು ಎಂದಿನಂತೆ ಕಾರ್ಯಾಲಯದ ಒಳಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಮಿನಿವಿಧಾನ ಸೌಧದಲ್ಲಿ ತಹಶಿಲ್ದಾರ, ಸಬ್ ರಜಿಸ್ಟಾರ, ಸರ್ವೇ ಸೇರಿದಂತೆ ಹಲವು ಕಚೇರಿಗಳಿವೆ. ಜೊತೆಗೆ ಈಗ ಬೆಳೆವಿಮೆ ಪ್ರಕ್ರಿಯೇ ಆರಂಭವಾಗಿದ್ದು ಪಹಣಿಗಾಗಿಯೂ ಸಾಕಷ್ಟು ಜನರು ಬಂದಿದ್ದಾರೆ. ಇದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ಮುಂಡರಗಿ ಪಟ್ಟಣದಲ್ಲಿ 40 ಕ್ಕೂ ಅಧಿಕ ಕೊರೊನಾ ಪತ್ತೆಯಾದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಕಚೇರಿಗೆ ಗೇಟ್ ಗೆ ಬೀಗ ಜಡಿದು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಬುಡಮೇಲು ಸಮೇತ ಜನರೇ ಕಿತ್ತೆಸೆಯುತ್ತಾರೆ – ಸಿ.ಟಿ.ರವಿ ವಾಗ್ದಾಳಿ

ಕುಕ್ಕರ್ ಬಾಂಬರ್ ಗಳಿಗೆ ಬಿರಿಯಾನಿ ತಿನ್ನಿಸುವವರು ಅಧಿಕಾರಕ್ಕೆ ಬಂದರೆ ಭದ್ರತೆಗೆ ಅಪಾಯ !ನಿಡಗುಂದಿ: ರಾಜ್ಯದಲ್ಲಿ ಕುಕ್ಕರ್…

ಎಟಿಎಂ ಕಳೆದ್ರೆ ಚಿಂತಿಸದಿರಿ, ನೀವು ಮಾಡಬೇಕಾಗಿದ್ದು ಏನು ಗೊತ್ತಾ?

ಅದೆಷ್ಟೋ ಜನ ಎಟಿಎಂ ಕಾರ್ಡ್ಗಳನ್ನು ಕಳೆದುಕೊಂಡು ಪರಿತಪಿಸಿದ್ದುಂಟು. ಮಾನಸಿಕ ನೆಮ್ಮದಿ ಕಳೆದುಕೊಂಡು ಇನ್ನಿಲ್ಲದೇ ಚಿಂತಿಸಿದ್ದುಂಟು. ಆದ್ರೆ ಇದೀಗ ಎಟಿಎಂ ಕಾರ್ಡ್ ಕಳೆದೊಯ್ತು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ನಿಮ್ಮ ಚಿಂತೆಗೊಂದು ಪರಿಹಾರ ಇಲ್ಲಿದೆ.

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.