ಮುಂಡರಗಿ: ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಇಂದು ಸೋಮವಾರ ಆಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿ ಕೆಲಸಕ್ಕೆ ಬಂದ ಜನ ತಹಶೀಲ್ದಾರ್ ಕಾರ್ಯಾಲಯದ ಗೇಟ್ ಬೀಗ ನೋಡಿ ನಿರಾಶೆಗೊಳಗಾದರು. ಗೇಟ್ ಬಳಿ ಒಬ್ಬ ಸಿಬ್ಬಂಧಿಯನ್ನು ಕೂರಿಸಿ ತುರ್ತು ಕಾರ್ಯದವರನ್ನು ಮಾತ್ರ ಬಿಡಲಾಗುತ್ತಿದೆ. ಬೆಳಿಗ್ಗೆಯಿಂದ ಮದ್ಯಾಹ್ನ 3:30 ಗಂಟೆಯ ಸುಮಾರಿಗೆ ಕೇವಲ 5 ಜನರನ್ನು ಮಾತ್ರ ಕಚೇರಿ ಕೆಲಸಕ್ಕೆ ಒಳಬಿಡಲಾಗಿತ್ತು. ಈ ಬಗ್ಗೆ ಸ್ವತಃ ಕಚೇರಿ ಸಿಬ್ಬಂಧಿಯೇ ಉತ್ತರಪ್ರಭಕ್ಕೆ ಮಾಹಿತಿ ನೀಡಿದರು.

ಸಿಬ್ಬಂಧಿಗಳು ಎಂದಿನಂತೆ ಕಾರ್ಯಾಲಯದ ಒಳಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಮಿನಿವಿಧಾನ ಸೌಧದಲ್ಲಿ ತಹಶಿಲ್ದಾರ, ಸಬ್ ರಜಿಸ್ಟಾರ, ಸರ್ವೇ ಸೇರಿದಂತೆ ಹಲವು ಕಚೇರಿಗಳಿವೆ. ಜೊತೆಗೆ ಈಗ ಬೆಳೆವಿಮೆ ಪ್ರಕ್ರಿಯೇ ಆರಂಭವಾಗಿದ್ದು ಪಹಣಿಗಾಗಿಯೂ ಸಾಕಷ್ಟು ಜನರು ಬಂದಿದ್ದಾರೆ. ಇದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ಮುಂಡರಗಿ ಪಟ್ಟಣದಲ್ಲಿ 40 ಕ್ಕೂ ಅಧಿಕ ಕೊರೊನಾ ಪತ್ತೆಯಾದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಕಚೇರಿಗೆ ಗೇಟ್ ಗೆ ಬೀಗ ಜಡಿದು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…

ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು : ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ

ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಐಪಿಎಲ್ ಬೆಟ್ಟಿಂಗ್ – ಧಾರವಾಡದಲ್ಲಿ ನಾಲ್ವರ ಬಂಧನ!

ಧಾರವಾಡ : ಅವಳಿ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ಬಂಧಿಸಲಾಗಿದೆ.

ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ. ವಿಜಯಪುರ…