ಮುಂಡರಗಿ: ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಇಂದು ಸೋಮವಾರ ಆಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿ ಕೆಲಸಕ್ಕೆ ಬಂದ ಜನ ತಹಶೀಲ್ದಾರ್ ಕಾರ್ಯಾಲಯದ ಗೇಟ್ ಬೀಗ ನೋಡಿ ನಿರಾಶೆಗೊಳಗಾದರು. ಗೇಟ್ ಬಳಿ ಒಬ್ಬ ಸಿಬ್ಬಂಧಿಯನ್ನು ಕೂರಿಸಿ ತುರ್ತು ಕಾರ್ಯದವರನ್ನು ಮಾತ್ರ ಬಿಡಲಾಗುತ್ತಿದೆ. ಬೆಳಿಗ್ಗೆಯಿಂದ ಮದ್ಯಾಹ್ನ 3:30 ಗಂಟೆಯ ಸುಮಾರಿಗೆ ಕೇವಲ 5 ಜನರನ್ನು ಮಾತ್ರ ಕಚೇರಿ ಕೆಲಸಕ್ಕೆ ಒಳಬಿಡಲಾಗಿತ್ತು. ಈ ಬಗ್ಗೆ ಸ್ವತಃ ಕಚೇರಿ ಸಿಬ್ಬಂಧಿಯೇ ಉತ್ತರಪ್ರಭಕ್ಕೆ ಮಾಹಿತಿ ನೀಡಿದರು.

ಸಿಬ್ಬಂಧಿಗಳು ಎಂದಿನಂತೆ ಕಾರ್ಯಾಲಯದ ಒಳಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಮಿನಿವಿಧಾನ ಸೌಧದಲ್ಲಿ ತಹಶಿಲ್ದಾರ, ಸಬ್ ರಜಿಸ್ಟಾರ, ಸರ್ವೇ ಸೇರಿದಂತೆ ಹಲವು ಕಚೇರಿಗಳಿವೆ. ಜೊತೆಗೆ ಈಗ ಬೆಳೆವಿಮೆ ಪ್ರಕ್ರಿಯೇ ಆರಂಭವಾಗಿದ್ದು ಪಹಣಿಗಾಗಿಯೂ ಸಾಕಷ್ಟು ಜನರು ಬಂದಿದ್ದಾರೆ. ಇದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ಮುಂಡರಗಿ ಪಟ್ಟಣದಲ್ಲಿ 40 ಕ್ಕೂ ಅಧಿಕ ಕೊರೊನಾ ಪತ್ತೆಯಾದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಕಚೇರಿಗೆ ಗೇಟ್ ಗೆ ಬೀಗ ಜಡಿದು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಲಕ್ಷ್ಮೇಶ್ವರ: ಅಗಸ್ತ್ಯ ತೀರ್ಥ ಸ್ಥಳ ಅಭಿವೃದ್ಧಿಗೆ ಒತ್ತಾಯ

ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.