ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಸದ್ಯ ವಕ್ಕರಿಸಿದೆ. 

ಗ್ರಾಮದಲ್ಲಿನ ಒಂದೇ ಮನೆಯಲಲಿ ಸುಮಾರು 60 ಜನರು ಇರುವ ಅವಿಭಕ್ತ ಕುಟುಂಬಕ್ಕೆ ಕೊರೊನಾ ಎಂಟ್ರಿ ಕೊಟ್ಟಿದೆ. ಮನೆಯ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಲಾಕ್ಡೌ ನ್ ಸಮಯದಲ್ಲಿ ಸೋಂಕಿತ ವ್ಯಕ್ತಿ ಕಿರಾಣಿ ಸಾಮಾನುಗಳನ್ನು ತರುವುದಕ್ಕೋಸ್ಕರ ಹುಬ್ಬಳ್ಳಿ, ಧಾರವಾಡ ಸುತ್ತಾಡಿದ್ದ. ಈ ಸಂದರ್ಭದಲ್ಲಿಯೇ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ಈ ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಗ್ರಾಮದ ತುಂಬ ಸುತ್ತಾಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಸದ್ಯ ಅವಿಭಕ್ತ ಕುಟುಂಬಕ್ಕೆ ಕೊರೊನಾ ಬಂದಿದ್ದರಿಂದ ಇಡಿ ಗ್ರಾಮವನ್ನ ಸಿಲ್ಡೌಗನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಬಾಗಲಕೋಟೆ ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್! 06

ಬಾಗಲಕೋಟೆ: ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 161ಕ್ಕೆ…

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂಪುಟ ವಿಸ್ತರಣೆಯೋ? ಪುನಾರಚನೆಯೋ? ಎರ್ಡ್ಮೂರು ದಿನದಲ್ಲಿ ತೀರ್ಮಾನ ಅಂದ್ರು ಸಿಎಂ

ಬಹುನಿರೀಕ್ಷಿತ ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಫಲಿತಾಂಶ ಹೊರಬೀಳಲು ಇನ್ನೆರೆಡು ದಿನ ಕಾಯಬೇಕು ಎಂದು ಹೇಳಲಾಗುತ್ತಿದೆ.