ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ನಾಯಕರ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಬೈಕನ್ನು ಚಟ್ಟಕ್ಕೆ ಕಟ್ಟಿ ಎತ್ತಿಕೊಂಡು ಶವದಂತೆ ಎತ್ತಿಕೊಂಡು ಹೋಗಿ ಪ್ರತಿಭಟಿಸಿದರು. ನೂರಾರು ಜನ ಭಾಗವಹಿಸಿದ್ದರಿಂದ ಟ್ರಾಫಿಕ್ ಜಾಮ್‌ನಲ್ಲಿ ಅಂಬುಲೆನ್ಸ್‌ ಸಿಲುಕಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 130 ಡಾಲರ್ ಇತ್ತು. ಆಗಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಗೆ ಕಾಂಗ್ರೆಸ್‌ ಸರ್ಕಾರ 2.41 ಲಕ್ಷ ಕೋಟಿ ರೂ ಸಬ್ಸಿಡಿ ನೀಡುತ್ತಿತ್ತು. ಈಗ ಕಚ್ಚಾ ತೈಲದ ಬ್ಯಾರೆಲ್ ಗೆ ಬೆಲೆ 40 ಡಾಲರ್ ನಷ್ಟಿದೆ. ಹೀಗಾಗಿ ಸದ್ಯ ತೈಲ ಬೆಲೆ ರೂ. 25 ಲೀಟರ್ ಗೆ ಮಾರಬೇಕು. ಕೇಂದ್ರ ಸರ್ಕಾರ ಒಂದು ರೂ. ಸಬ್ಸಿಡಿ ನೀಡುತ್ತಿಲ್ಲ. ಅಬಕಾರಿ ಸುಂಕ ಏರಿಸಿದ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್-19 ನಿಯಂತ್ರಣ : ಜಿಲ್ಲೆಯಲ್ಲಿ 2 ವಾರ ಪ್ರತಿಬಂಧಕಾಜ್ಞೆ ಮುಂದುವರಿಕೆ

ಕೋವಿಡ್ -19 ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ ನಿಗದಿತ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚಾರ ನಿಷೇಧಿಸಿದೆ.

ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.

ಕರ್ಪ್ಯು: ಜಿಲ್ಲಾಧಿಕಾರಿ ವಿವಿಧ ಸ್ಥಳಗಳಿಗೆ ಭೇಟಿ

ಗದಗ : ಜಿಲ್ಲಾದ್ಯಂತ ಜಾರಿಗೊಳಿಸಲಾದ ವಾರಾಂತ್ಯದ ಕರ್ಪ್ಯು ಹಿನ್ನೆಲಯಲ್ಲಿ ನಗರದ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್…