ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ನಾಯಕರ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಬೈಕನ್ನು ಚಟ್ಟಕ್ಕೆ ಕಟ್ಟಿ ಎತ್ತಿಕೊಂಡು ಶವದಂತೆ ಎತ್ತಿಕೊಂಡು ಹೋಗಿ ಪ್ರತಿಭಟಿಸಿದರು. ನೂರಾರು ಜನ ಭಾಗವಹಿಸಿದ್ದರಿಂದ ಟ್ರಾಫಿಕ್ ಜಾಮ್‌ನಲ್ಲಿ ಅಂಬುಲೆನ್ಸ್‌ ಸಿಲುಕಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 130 ಡಾಲರ್ ಇತ್ತು. ಆಗಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಗೆ ಕಾಂಗ್ರೆಸ್‌ ಸರ್ಕಾರ 2.41 ಲಕ್ಷ ಕೋಟಿ ರೂ ಸಬ್ಸಿಡಿ ನೀಡುತ್ತಿತ್ತು. ಈಗ ಕಚ್ಚಾ ತೈಲದ ಬ್ಯಾರೆಲ್ ಗೆ ಬೆಲೆ 40 ಡಾಲರ್ ನಷ್ಟಿದೆ. ಹೀಗಾಗಿ ಸದ್ಯ ತೈಲ ಬೆಲೆ ರೂ. 25 ಲೀಟರ್ ಗೆ ಮಾರಬೇಕು. ಕೇಂದ್ರ ಸರ್ಕಾರ ಒಂದು ರೂ. ಸಬ್ಸಿಡಿ ನೀಡುತ್ತಿಲ್ಲ. ಅಬಕಾರಿ ಸುಂಕ ಏರಿಸಿದ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.

ಗದಗ ಜಿಲ್ಲೆಯಲ್ಲಿಂದು 9 ಪಾಸಿಟಿವ್ ಎಲ್ಲೆಲ್ಲಿ..?

ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ…

ಜಿಂದಾಲ್ ಕಂಪೆನಿಗೆ ಸರ್ಕಾರ ಕದ್ದುಮುಚ್ಚಿ ಭೂಮಿ ಮಾರಾಟ

ಜಿಂದಾಲ್ ಕಂಪೆನಿಗೆ ರಾಜ್ಯ ಸರ್ಕಾರ ಸದ್ದಿಲ್ಲದೇ 3677 ಎಕರೆ ಭೂಮಿಯನ್ನು ಮಾರಾಟ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.