ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 7,507 ಜನರು ಗುಣಮುಖರಾಗಿದ್ದಾರೆ. 5,472 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇ. 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡು ಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ. 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ. 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಲಿಂಗಾಯತರನ್ನು ಮುಗಿಸಲು ಪ್ರಹ್ಲಾದ್ ಜೋಶಿ ನಮ್ಮ ವಿರುದ್ಧ ನಿಂತಿದ್ದಾರೆ – ವಿಜಯ್ ಕುಲಕರ್ಣಿ ಆರೋಪ!

ಹುಬ್ಬಳ್ಳಿ : ಯೋಗೀಶಗೌಡ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೊಳಪಟ್ಟಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ವರುಣನ ಆರ್ಭಟ – ಸಂತ್ರಸ್ಥರಿಗೆ ಪರಿಹಾರ ಘೋಷಿಸಿದ ಸರ್ಕಾರ!

ಪ್ರವಾಹ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆರಾಯನ ಅವಾಂತರ ಜೋರಾಗಿದೆ.

ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು…