ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ ಸುಮಾರು 21 ಸಾವಿರ ಜನರನ್ನು ಆರೋಗ್ಯ ಇಲಾಖೆ ಗುರುತಿಸಿದೆ.

ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸುತ್ತಿದೆ. ಸದ್ಯ ಶೇ. 91ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, 63.85 ಲಕ್ಷ ಜನರು ಸೋಂಕು ತಗಲುವ ಅಪಾಯದ ಸ್ಥಿತಿಯಲ್ಲಿದ್ದಾರೆ. ಈ ವ್ಯಕ್ತಿಗಳು 60 ವರ್ಷದ ಮೇಲ್ಪಟ್ಟವರು, ಮಧುಮೇಹ, ಐಎಲ್‌ಐ, ಉಸಿರಾಟದ ತೊಂದರೆ, ಮೂತ್ರಪಿಂಡದ ತೊಂದರೆ ಮೊದಲಾದ ಸಮಸ್ಯೆಗಳನ್ನು ಉಳ್ಳವರಾಗಿದ್ದಾರೆ. ಈ ಪೈಕಿ 21 ಸಾವಿರ ಜನರು ಐಎಲ್‌ ಐ ಸೋಂಕಿನಿಂದ ಬಳಲುತ್ತಿರುವುದು ಕಂಡುಬಂದಿದೆ. ಆದ್ದರಿಂದ ಇವರಿಗೆ ಕೂಡಲೇ ಆಸ್ಪತ್ರೆಗೆ ಹೋಗಿ ಕೋವಿಡ್‌ ಪರೀಕ್ಷೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಹಾಸನ, ಉತ್ತರ ಕನ್ನಡ, ವಿಜಯಪುರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ಧಾರವಾಡ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿಸಮೀಕ್ಷೆ ಪೂರ್ಣಗೊಂಡಿದೆ. ಉಳಿದ ಜಿಲ್ಲೆಗಳ ಸಮೀಕ್ಷೆ ಅಂತಿಮ ಹಂತದಲ್ಲಿದೆ.

Leave a Reply

Your email address will not be published. Required fields are marked *

You May Also Like

ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ: ಡಿಸಿಎಂ ಕಾರಜೋಳ

ಗದಗ: ಪೂರ್ಣಾವಧಿಗೆ ಬಿ.ಎಸ್.ಯಡಿಯೂರಪ್ಪ ಅವ್ರೇ ಸಿಎಂ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಡಿಸಿಎಂ…

ಪಶ್ಚಿಮ ಬಂಗಾಳದ ಹೌರಾ ಘಟನೆಗೆ ಪವನ್ ಮೇಟಿ ಖಂಡನೆ

ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.

ಮುಳುಗದ ರವಿ‌ ಬೆಳಗು

ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.

“ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಗೆ ಇ ಕೆವೈಸಿ ಜೋಡಣೆಗೆ ರೈತರಲ್ಲಿ ಮನವಿ”

ಉತ್ತರಪ್ರಭ ಸುದ್ದಿ ಗದಗ: ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಯಡಿ ಮುಂದಿನ ಕಂತುಗಳನ್ನು ರೈತರ…