ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ ಸುಮಾರು 21 ಸಾವಿರ ಜನರನ್ನು ಆರೋಗ್ಯ ಇಲಾಖೆ ಗುರುತಿಸಿದೆ.

ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸುತ್ತಿದೆ. ಸದ್ಯ ಶೇ. 91ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, 63.85 ಲಕ್ಷ ಜನರು ಸೋಂಕು ತಗಲುವ ಅಪಾಯದ ಸ್ಥಿತಿಯಲ್ಲಿದ್ದಾರೆ. ಈ ವ್ಯಕ್ತಿಗಳು 60 ವರ್ಷದ ಮೇಲ್ಪಟ್ಟವರು, ಮಧುಮೇಹ, ಐಎಲ್‌ಐ, ಉಸಿರಾಟದ ತೊಂದರೆ, ಮೂತ್ರಪಿಂಡದ ತೊಂದರೆ ಮೊದಲಾದ ಸಮಸ್ಯೆಗಳನ್ನು ಉಳ್ಳವರಾಗಿದ್ದಾರೆ. ಈ ಪೈಕಿ 21 ಸಾವಿರ ಜನರು ಐಎಲ್‌ ಐ ಸೋಂಕಿನಿಂದ ಬಳಲುತ್ತಿರುವುದು ಕಂಡುಬಂದಿದೆ. ಆದ್ದರಿಂದ ಇವರಿಗೆ ಕೂಡಲೇ ಆಸ್ಪತ್ರೆಗೆ ಹೋಗಿ ಕೋವಿಡ್‌ ಪರೀಕ್ಷೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಹಾಸನ, ಉತ್ತರ ಕನ್ನಡ, ವಿಜಯಪುರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ಧಾರವಾಡ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿಸಮೀಕ್ಷೆ ಪೂರ್ಣಗೊಂಡಿದೆ. ಉಳಿದ ಜಿಲ್ಲೆಗಳ ಸಮೀಕ್ಷೆ ಅಂತಿಮ ಹಂತದಲ್ಲಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯಪಾಲ ಆಗಮನ- ಆಲಮಟ್ಟಿ ಫೂಲ್ ಟೈಟ್ : ಎತ್ತ ನೋಡಿದರೂ ಪೋಲೀಸ್ ಸರ್ಪಗಾವಲು-ಬಿಗಿ ಭದ್ರತೆ

ಉತ್ತರಪ್ರಭಆಲಮಟ್ಟಿ: ರಾಜ್ಯಪಾಲ ಥಾವರ್ ಚೆಂದ ಗೆಹ್ಲೂಟ್ ಮಂಗಳವಾರ ಮುಸ್ಸಂಜೆ ಆಗಮನದ ಹಿನ್ನಲೆಯಲ್ಲಿ ಕೃಷ್ಣಾ ತೀರದ ಹಸಿರು…

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ

ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.

ಗಡಿಬಿಡಿಯ ಲಾಕ್ ಡೌನ್ ಜಾರಿ: ಗಲಿಬಿಲಿಯಲ್ಲಿ ಉತ್ಪಾದನಾ ಫ್ಯಾಕ್ಟರಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹಲವು ಜಿಲ್ಲೆ ಮತ್ತು ನಗರಗಳಲ್ಲಿ ದಿಢೀರ್ ಲಾಕ್ ಡೌನ್ ಹೇರಿದ್ದರಿಂದ ಕೈಗಾರಿಕಾ ಉತ್ಪಾದನಾ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ.