ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಲಾಕ್ ಡೌನ್ ವಿಷಯ ಮುನ್ನೆಲೆಗೆ ಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್ ಎಲ್ಲದ್ದಕ್ಕೂ 7ನೇ ತಾರೀಖಿನವರೆಗೆ ಕಾಯಿರಿ ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಆರ್‌.ಅಶೋಕ್‌ ಮಾತನಾಡಿದರು, ಜು. 7ರ ನಂತರ ಸಿಎಂ ಹಲವು ಬದಲಾವಣೆಗಳನ್ನು ತೆಗೆದುಕೊಳ್ಳಲಿದ್ದಾರೆ. 7ರ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3 ರಂದು ಕೊನೆಗೊಳ್ಳಲಿವೆ. ಭಾನುವಾರ ಲಾಕ್‌ಡೌನ್‌ ಇದೆ. ಹೀಗಾಗಿ ಜುಲೈ 7 ಮಂಗಳವಾರಿಂದ ಬೆಂಗಳೂರಿನಲ್ಲಿ ಮಾತ್ರ ಲಾಕ್‌ಡೌನ್‌ ಜಾರಿಯಾಗುತ್ತಾ ಎಂಬ ಪ್ರಶ್ನೆ ಸದ್ಯ ಎಲ್ಲರನ್ನೂ ಕಾಡುತ್ತಿದೆ.

ಕೆಲವು ತಜ್ಞರು ಮುಂದಿನ ರಣ ಭೀಕರ ಪರಿಸ್ಥಿತಿ ಎದುರಿಸಲು ಲಾಕ್ ಡೌನ್ ಅಸ್ತ್ರದ ಬಗ್ಗೆಯೂ ಪ್ರಸ್ತಾವನೆ ಮಾಡಿದ್ದಾರೆ. ನಿತ್ಯ ಒಂದು ಸಾವಿರ ಕೇಸ್ ಬಂದರೆ, ಲಾಕ್ ಡೌನ್ ಮಾಡಲೇಬೇಕು ಎಂದು ಹೇಳಿದ್ದಾರೆ. ಆದರೆ, ಲಾಕ್ ಡೌನ್ಗೆಂ ಮಾತ್ರ ಸಿಎಂ ಒಪ್ಪಲಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, 7ರ ನಂತರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ನೇಪಾಳದೊಂದಿಗೆ ನಮ್ಮದು ಗಟ್ಟಿ ಸಂಬಂಧ: ಹೈರಾಣಾಗಿರುವ ಭಾರತಕ್ಕೆ ಇದು ಇನ್ನಷ್ಟು ಮುಜುಗರ

ದೆಹಲಿ: ನೇಪಾಳದೊಂದಿಗೆ ನಮ್ಮ ಸಂಬಂಧ ಬಲಿಷ್ಠವಾಗಿದೆ ಎಂದು ಭಾರತೀಯ ಸೇನಾ ಮುಖಸ್ಥ ಎಂ.ಎಂ.ನರವಣೆ ಹೇಳಿದ್ದಾರೆ. ನಾವು…

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಂಡರಗಿ ಜಿಎಚ್ಎಚ್ ಆಗ್ರೋ ಕೇಂದ್ರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ

ಜಿಎಚ್ಎಚ್ ಆಗ್ರೋ ಕೇಂದ್ರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೇಂದ್ರ ಜಪ್ತಿ ಮಾಡಿದ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

ಆದ್ರಳ್ಳಿ ವಡ್ಡರಪಾಳ್ಯ ಸಮಸ್ಯೆ ವಾರದೊಳಗೆ ಪರಿಹರಿಸದಿದ್ರೆ ಹೋರಾಟ: ರವಿಕಾಂತ ಅಂಗಡಿ

ದಶಕದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುವ ಆದ್ರಳ್ಳಿಯ ವಡ್ಡರಪಾಳ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆಡಳಿತ ವರ್ಗ ಮುಂದಾಗಬೇಕು.